ತರಕಾರಿ ಮತ್ತು ನರ್ಸರಿ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ

ತರಕಾರಿ ಮತ್ತು ನರ್ಸರಿ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮ


ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಬಂಟ್ವಾಳ ಮತ್ತು ರುಡ್ ಸೆಟ್ ಸಂಸ್ಥೆ ಉಜಿರೆ ಇದರ ಜಂಟಿ ಆಶ್ರಯದಲ್ಲಿ ಪ್ರಾಜೆಕ್ಟ್ ಉನ್ನತಿ ಯೋಜನೆಯಡಿ ನರೇಗಾ ಯೋಜನೆಯಲ್ಲಿ 60 ಮಾನವ ದಿನಗಳ ಕೆಲಸ ಪೂರೈಸಿದ ಫಲಾನುಭವಿಗಳಿಗೆ ತರಕಾರಿ ಮತ್ತು ನರ್ಸರಿ ನಿರ್ವಹಣೆ ಕುರಿತು ತರಬೇತಿ ಕಾರ್ಯಕ್ರಮವನ್ನು ಬಂಟ್ವಾಳ ತಾ.ಪಂ. ಎಸ್.ಜಿ.ಎಸ್.ವೈ. ಸಭಾಂಗಣದಲ್ಲಿ ಸೋಮವಾರ ನಡೆಸಲಾಯಿತು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜಯ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಸರಿನಲ್ಲಿ ಸೂಚಿಸಿದಂತೆ ಯೋಜನೆಯ ಮೂಲ ಉದ್ದೇಶವೇ ಸಮಾಜದ ಪ್ರತಿಯೊಬ್ಬ ವ್ಯಕ್ತಿಯ ಜೀವನದಲ್ಲಿ ‘ಉನ್ನತಿಯನ್ನು ತರುವುದಾಗಿದೆ. ಈ ತರಬೇತಿಯು ಕೌಶಲವನ್ನು ನೀಡುವ ಮೂಲಕ ಉದ್ಯೋಗದಾತರನ್ನಾಗಿ ಮಾಡುವ ಗುರಿ ಹೊಂದಿದೆ. ಇಲ್ಲಿ ಕಲಿತ ಪ್ರತಿಯೊಂದು ಅಂಶವೂ ನಿಮ್ಮ ಕೈಹಿಡಿಯಲಿದೆ ಎಂದು ಹೇಳಿದರು.

ಎನ್‌ಆರ್‌ಎಲ್‌ಎಂ ಜಿಲ್ಲಾ ವ್ಯವಸ್ಥಾಪಕರಾದ ಶಕುಂತಲಾ ಮಾತನಾಡಿ, ಉನ್ನತಿ ತರಬೇತಿಯು ಒಟ್ಟು 12 ದಿನಗಳ ಕಾಲ ನಡೆಯಲಿದ್ದು, ಶಿಬಿರಾರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ತಾಲೂಕು ಎನ್.ಆರ್.ಎಲ್.ಎಂ. ಕಾರ್ಯಕ್ರಮ ವ್ಯವಸ್ಥಾಪಕರಾದ ಸುಧಾ, ಹಿರಿಯ ತರಬೇತುದಾರರಾದ ಕರುಣಾಕರ ಜೈನ್, ಸಂಸ್ಥೆಯ ಸಿಬ್ಬಂದಿಗಳಾದ ಕಾಶ್ಮೀರ್ ಡಿಸೋಜ, ಪ್ರವೀಣ್, ತಾಲೂಕು ನರೇಗಾ ಐಇಸಿ ಸಂಯೋಜಕರಾದ ರಾಜೇಶ್, ತಾಲೂಕು ಎನ್.ಆರ್.ಎಲ್.ಎಂ. ಕೃಷಿ ವ್ಯವಸ್ಥಾಪಕರಾದ ಸಾಂಘವಿ, ಜಿಲ್ಲೆಯ ಎಲ್ಲಾ ತಾಲೂಕುಗಳ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. 

ತಾಲೂಕು ಎನ್.ಆರ್.ಎಲ್.ಎಂ. ವ್ಯವಸ್ಥಾಪಕ ಪ್ರದೀಪ್ ಕಾಮತ್ ಸ್ವಾಗತಿಸಿ, ಪ್ರೀತಿಕಾ ಪ್ರಾರ್ಥಿಸಿದರು. ತಾಲೂಕು ಎನ್.ಆರ್.ಎಲ್.ಎಂ. ವಲಯ ಮೇಲ್ವಿಚಾರಕಿ ದೀಕ್ಷಿತಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article