ಕೋಟ: ಯೋಧರೊಂದಿಗೆ ನಡಿಗೆ
ಹುತಾತ್ಮ ಯೋಧ ಅನೂಪ್ ಪೂಜಾರಿಯವರ ಪತ್ನಿ ಮಂಜುಶ್ರೀ ಜಾಥಕ್ಕೆ ಚಾಲನೆ ನೀಡಿದರು. ಈ ಸಂದರ್ಭ ನೂರಾರು ಸಂಖ್ಯೆಯ ನಿವೃತ್ತ ಯೋಧರು, ಸೇನಾ ತರಬೇತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕೋಟ ಅಮೃತೇಶ್ವರೀ ದೇಗುಲದಿಂದ ಕಾರಂತ ಕಲಾಭವನದ ತನಕ ಜಾಥ ನಡೆಸಿದರು. ಅನಂತರ ಇಲ್ಲಿನ ವಿಗ್-21 ಯುದ್ಧ ವಿಮಾನದ ಸಮೀಪ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಲಾಯಿತು.
ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿಗ್-21 ಯುದ್ಧ ವಿಮಾನದಲ್ಲಿ ಸೇವೆ ಸಲ್ಲಿಸಿದ ವಾರಂಟ್ ಆಫೀಸರ್ ಶ್ರೀಧರ ಭಟ್, ಹಿರಿಯ ಅಧಿಕಾರಿಗಳಾದ ವ್ಯಾಸರಾಜ್, ಮೋಹನ್ ದಾಸ್ ಶೆಟ್ಟಿ, ವಿಕ್ಟರ್, ಸುನಿಲ್ ಶೆಣೈ, ಶಿವಪ್ರಸಾದ್, ಸುಧಾಕರ ದೇವಾಡಿಗ, ಸುಭಾಶ್ ಶಾಸ್ತ್ರಿ, ಶ್ರೀನಿವಾಸ ಗಾಣಿಗ, ಯಶವಂತ ಶೆಟ್ಟಿರವರನ್ನು ಗೌರವಿಸಲಾಯಿತು.
ಉದ್ಯಮಿ ಬಂಜಾರ ಡಾ.ಕೆ. ಪ್ರಕಾಶ್ ಶೆಟ್ಟಿಸಮ್ಮಾನ ನೆರವೇರಿಸಿ ಶುಭ ಹಾರೈಸಿದರು.
ನಿವೃತ್ತ ಯೋಧರ ಪರವಾಗಿ ನಿವೃತ್ತ ಮೇಜರ್ ಜನರಲ್ ಎಮ್.ವಿ. ಭಟ್, ರಮೇಶ್ ಕಾರ್ಣಿಕ್ ಅತುಲ್ ಕುಮಾರ್ ರಸ್ತೋದಿ ಮಾತನಾಡಿದರು.
ಉಡುಪಿ ಚಿಕ್ಕ ಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಕುಂದಾ ಪುರ ಉಪ ವಿಭಾಗಧಿಕಾರಿ ರಶ್ಮಿ, ಶ್ರೀಕೃಷ್ಣ ಆಗ್ರೋ ಇಂಡಸ್ಟ್ರೀಸ್ ಮಾಲಕ, ಉದ್ಯಮಿ ಸಂಪತ್ ಕುಮಾರ್ ಶೆಟ್ಟಿ, ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿ, ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಕುಂದರ್, ಕೋಟ ಗ್ರಾ.ಪಂ. ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ, ಕಾರಂತ ಭವನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಇದ್ದರು.
ಕಾರಂತ ಪ್ರತಿಷ್ಟಾನದ ಗೌರವಾಧ್ಯಕ್ಷ ಉದ್ಯಮಿ ಆನಂದ್ ಕುಂದರ್ ಸ್ವಾಗತಿಸಿ, ಕೋಟ ಶ್ರೀನಿವಾಸ ಪೂಜಾರಿ ಪ್ರಾಸ್ತಾವಿಕ ಮಾತನಾಡಿದರು. ನಿವೃತ್ತ ಯೋಧ ಜಾರ್ಜೆಡ್ಡು ಶ್ರೀನಿವಾಸ ಗಾಣಿಗ ನಿವೃತ್ತ ಸೈನಿಕರನ್ನು ಪರಿಚಯಿಸಿದರು. ವಿಜಯಭಟ್ ಕಡೆಕಾರು ವಂದೇ ಮಾತರಂ ಹಾಡಿದರು.
ಪಿಡಿಓ ರವೀಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.