ಕೊಲೆ ಆರೋಪಿಗೆ ಜೀವವಾದಿ ಶಿಕ್ಷೆ, 2 ಲಕ್ಷ ರೂ ದಂಡ
ಘಟನೆಯ ವಿವರ:
ಮೂಲ್ಕಿ ತಾಲೂಕು ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ 29-04-2020ರಂದು ಆರೋಪಿ ಆಲ್ಫೋನ್ಸ್ ಸಲ್ದಾನ ಎಂಬಾತ ತನ್ನ ನೆರೆಕರೆ ಮನೆಯ ವಿನ್ಸಿ ಯಾನೆ ವಿನ್ಸೆಂಟ್ ಡಿ’ಸೋಜಾನನ್ನು ಮರದ ಗೆಲ್ಲು ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ವಿನ್ಸಿ ಯಾನೆ ವಿನ್ಸೆಂಟ್ ಡಿ’ಸೋಜಾನನ್ನು ರಾಜಿ ಪಂಚಾಯತಿಕೆ ಮಾಡುವ ನೆಪದಲ್ಲಿ ತನ್ನ ಮನೆಗೆ ಕರೆಸಿ ಗಲಾಟೆ ಮಾಡಿ ಚೂರಿಯಿಂದ ತಿವಿದು ಕೊಲೆ ಮಾಡಿದ್ದಲ್ಲದೇ, ರಕ್ಷಿಸಲು ಧಾವಿಸಿ ಬಂದ ವಿನ್ಸಿ ಯಾನೆ ವಿನ್ಸೆಂಟ್ ಡಿ’ಸೋಜಾನ ಪತ್ನಿ ಹೆಲೆನ್ ಡಿ’ಸೋಜಾ ಯಾನೆ ಹೆಲೆನ್ ರೋಸಿ ರೋಡ್ರಿಗಸ್ಳನ್ನು ಅಟ್ಟಾಡಿಸಿ ಚೂರಿಯಿಂದ ಅಮಾನುಷವಾಗಿ ತಿವಿದು ಕೊಲೆ ಗೈದಿದ್ದು, ಈ ಬಗ್ಗೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ. 31/2020 ಕಲಂ 341, 504, 506, 302 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು, ಅಂದಿನ ಮೂಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ ಅವರು ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದು, ತನಿಖಾ ಸಹಾಯಕರಾಗಿ ಮೂಲ್ಕಿ ಪೊಲೀಸ್ ಠಾಣೆಯ ಎಎಸ್ಐ ಉಮೇಶ್ ಕೆ. ಹಾಗೂ ಹೆಚ್.ಸಿ. ವಾದಿರಾಜ ಅವರು ತನಿಖಾ ಸಹಾಯಕರಾಗಿ ತನಿಖೆಗೆ ಸಹಕರಿಸಿರುತ್ತಾರೆ.
ಈ ಪ್ರಕರಣವು ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, 1ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅವರು ವಿಚಾರಣೆ ನಡೆಸಿ ಪ್ರಸ್ತುತ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ಅವರು ಅರೋಪಿಗೆ ಜ.19 ರಂದು ಜೀವಾವಧಿ ಶಿಕ್ಷೆಯನ್ನು ವಿಧಿಸಿರುತ್ತಾರೆ. ಹಾಗೂ 2 ಲಕ್ಷ ರೂ. ದಂಡ ವಿಧಿಸಿರುತ್ತಾರೆ.
ಸಾಕ್ಷಿ ವಿಚಾರಣೆ ಸಮಯ ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಅವರು ಅಭಿಯೋಜನೆ ಪರ ವಾದ ಮಂಡಿಸಿರುತ್ತಾರೆ. ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆ ಸಮಯ ಮೂಲ್ಕಿ ಪೊಲೀಸ್ ಠಾಣಾ ಮಪಿಸಿ ಕಾವ್ಯಾ ಅವರು ಸಹಕರಿಸಿದರು.