ಕರಾವಳಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ವಿಶೇಷ ಆದ್ಯತೆ ನೀಡಲಿದೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು ಹೊರತುಪಡಿಸಿದರೆ ಆದಾಯ ಹೆಚ್ಚು ಇರುವ ನಗರ ಮಂಗಳೂರು. ದೇಶದಲ್ಲಿ ಮಹಾರಾಷ್ಟ್ರ ಬಿಟ್ಟರೆ ಜಿಎಸ್ಟಿ ಸಂಗ್ರಹದಲ್ಲಿ ಕರ್ನಾಟ ದ್ವಿತೀಯ ಸ್ಥಾನದಲ್ಲಿದೆ ಎಂದ ಸಿಎಂ, 320 ಕಿ.ಮೀ. ಉದ್ದದ ಈ ಕರಾವಳಿಯಲ್ಲಿ ಶಿಕ್ಷಣ, ಬ್ಯಾಂಕಿಂಗ್, ಆರೋಗ್ಯ, ಸಂಸ್ಕೃತಿ ಎಲ್ಲವೂ ಇದೆ, ಆದರೆ ಪ್ರವಾಸೋದ್ಯಮ ಮಾತ್ರ ನಿರೀಕ್ಷಿತ ಪ್ರಮಾಣದಲ್ಲಿ ಅಭಿವೃದ್ಧಿ ಕಂಡಿಲ್ಲ. ಕೇರಳಕ್ಕಿಂತ ಕರ್ನಾಟಕ ಪ್ರವಾಸೋದ್ಯಮದಲ್ಲಿ ಮುಂದೆ ಇರಬೇಕು. ಹಾಗಾದಾಗ ಮಾತ್ರ ಆದಾಯದಲ್ಲೂ ಕರಾವಳಿ ಕರ್ನಾಟಕ ಮುಂಚೂಣಿ ದಾಖಲಿಸಲು ಸಾಧ್ಯವಿದೆ ಎಂದರು.
ಶಾಂತಿ ಸ್ಥಾಪನೆ ಉಳಿಸಿಕೊಳ್ಳಿ:
ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಮಾತ್ರ ಅಂತಹ ಪ್ರದೇಶ ಅಭಿವೃದ್ಧಿ ಹೊಂದಲು ಸಾಧ್ಯ. ಸದ್ಯ ಇಲ್ಲಿ ಶಾಂತಿ ಸ್ಥಾಪನೆಯಾಗಿದ್ದು, ಇದು ಹೀಗೆಯೇ ಮುಂದುವರಿಯಬೇಕು. ಜಾತಿ, ಧರ್ಮಗಳ ಹೆಸರಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡಬಾರದು. ಎಲ್ಲ ಧರ್ಮಗಳೂ ಪ್ರೀತಿಯ ಹೊರತು ದ್ವೇಷವನ್ನು ಬೋದಿ ಸಿಲ್ಲ. ಕರಾವಳಿ ಯಾವಾಗಲೂ ಕುವೆಂಪು ಕಲ್ಪನೆಯ ಸರ್ವಜನಾಂಗದ ಶಾಂತಿಯ ತೋಟ ಆಗಬೇಕು. ಇದಕ್ಕೆ ಪೂರಕವಾದ ಎಲ್ಲ ಸಹಕಾರವನ್ನೂ ಸರ್ಕಾರ ನೀಡುತ್ತದೆ ಎಂದರು.
ಸಿಆರ್ಝಡ್ ಸರಳೀಕರಣಕ್ಕೆ ದೆಹಲಿ ಭೇಟಿ:
ಕರ್ನಾಟಕ ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಅನಾನುಕೂಲವಾಗಿರುವ ಸಿಆರ್ಝಡ್(ಕರಾವಳಿ ನಿಯಂತ್ರಣ ವಲಯ) ನಿಯಮವನ್ನು ಸರಳೀಕರಣಗೊಳಿಸುವ ನಿಟ್ಟಿನಲ್ಲಿ ಶೀಘ್ರವೇ ಸಿಎಂ ಜೊತೆ ದೆಹಲಿಗೆ ನಿಯೋಗ ಕರೆದುಕೊಂಡು ಹೋಗುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಕೇರಳ ಹಾಗೂ ಗೋವಾದಲ್ಲಿ ಕರಾವಳಿಯಲ್ಲಿ ಪ್ರವಾಸೋದ್ಯಮಕ್ಕೆ ಸಾಕಷ್ಟು ಅವಕಾಶ ಲಭಿಸುತ್ತಿದೆ. ಆದರೆ ಕರ್ನಾಟಕದಲ್ಲಿ ಸಿಆರ್ಝಡ್ ನಿಯಮ ಅಡ್ಡಿಯಾಗುತ್ತಿದೆ. ಹಿ ಗಾಗಿ ಈ ನಿಯಮ ಸರಳೀಕರಣಗೊಳಿಸಲು ಕರಾವಳಿ ಜಿಲ್ಲೆಗಳ ಸಂಸದರು, ಉಸ್ತುವಾರಿ ಸಚಿವರು, ಶಾಸಕರನ್ನು ಸಿಎಂ ನೇತೃತ್ವದಲ್ಲಿ ದೆಹಲಿಗೆ ಕರೆದುಕೊಂಡು ಹೋಗಲಾಗುವುದು. ಅಲ್ಲಿ ಕೇಂದ್ರ ಅರಣ್ಯ ಹಾಗೂ ಪ್ರವಾಸೋದ್ಯಮ ಸಚಿವರ ಜೊತೆ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.
ಪ್ರತ್ಯೇಕ ನೋಡೆಲ್ ಏಜೆನ್ಸಿ:
ಕರಾವಳಿಯಲ್ಲಿ 22 ಬೀಚ್ ಹಾಗೂ 30 ಪ್ರಮುಖ ಧಾರ್ಮಿಕ ಕೇಂದ್ರಗಳಿವೆ. ಇದರಿಂದಾಗಿ ಕರಾವಳಿಯಲ್ಲಿ ಪ್ರವಾಸೋದ್ಯಮ ಹೂಡಿಕೆಯನ್ನು ಪ್ರೋತ್ಸಾಹಿಸಲು ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ. ಮಧ್ಯರಾತ್ರಿ ವರೆಗೂ ಪ್ರವಾಸೋದ್ಯಮ ಪೂರಕ ಚಟುವಟಿಕೆ ನಡೆಸುವಂತಾಗಲು ಕರಾವಳಿಗೆ ಪ್ರತ್ಯೇಕವಾಗಿ ನೋಡೆಲ್ ಅದಿ ಕಾರಿ ಹಾಗೂ ಏಜೆನ್ಸಿ ನೇಮಕಕ್ಕೆ ಚಿಂತನೆ ನಡೆಸಲಾಗಿದೆ ಎಂದರು.
ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಕರಾವಳಿ ಪ್ರವಾಸೋದ್ಯಮ ನಕ್ಷೆಯಲ್ಲಿ ಗುರುತಿಸುವಂತಾಗಬೇಕು. ಇಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು, ಜಾಗತಿಕವಾಗಿ ಕರಾವಳಿ ಆಕರ್ಷಣೆಗೆ ಬೇಕಾದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದರು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ವೈದ್ಯ ಮಾತನಾಡಿ, ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಬೇಕಾದರೆ ಹೂಡಿಕೆದಾರರಿಗೆ ಸಿಂಗಲ್ ವಿಂಡೋ ಕ್ಲಿಯರೆನ್ಸ್ ವ್ಯವಸ್ಥೆ ಜಾರಿಗೆ ತರಬೇಕು. ಇಲ್ಲಿಗೆ ಪ್ರತ್ಯೇಕ ಪ್ಯಾಕೇಜ್ ರೂ ಪುಗೊಳ್ಳಬೇಕು. ಸಿಆರ್ಝಡ್ ನಿಯಮ ಸರಳೀಕರಣವಾಗಬೇಕು ಎಂದು ಆಗ್ರಹಿಸಿದರು.
ಸ್ಪೀಕರ್ ಯು.ಟಿ. ಖಾದರ್, ಸಿಎಂ ರಾಜಕೀಯ ಸಲಹೆಗಾರ ನಜೀರ್ ಅಹ್ಮದ್, ಶಾಸಕರಾದ ಅಶೋಕ್ ಕುಮಾರ್ ರೈ, ಗುರ್ಮೆ ಸುರೇಶ್ ಶೆಟ್ಟಿ, ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ತಿಲೋಕ್ಚಂದ್ರ ಮತ್ತಿತರರಿದ್ದರು.
ಕರ್ನಾಟಕ ಟೂರಿಸಂ ಮಾದರಿಯಾಗಲಿ: ಸಚಿವ ದಿನೇಶ್ ಗೂಂಡೂರಾವ್
ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ವಾಗತಿಸಿ, ಪ್ರಾಸ್ತಾವಿಕದಲ್ಲಿ, ಪ್ರವಾಸೋದ್ಯಮದಲ್ಲಿ ‘ಕರ್ನಾಟಕ ಟೂರಿಸಂ’ ಮಾದರಿಯಾಗಬೇಕು. ಕರಾವಳಿಯ ಒಂದೆರಡು ಕಡೆ ಪ್ರವಾಸೋದ್ಯಮ ಯೋಜನೆಗಳನ್ನು ಹಮ್ಮಿಕೊಂಡರೆ ಸಹಜವಾಗಿ ಟೂರಿಸಂ ಹೂಡಿಕೆಗೆ ಅನೇಕರು ಮುಂದೆ ಬಂದು ಅಭಿವೃದ್ಧಿಯಾಗಲು ಸಾಧ್ಯವಿದೆ. ಈಗಾಗಲೇ ಹೊಟೇಲ್ ಮಾಲೀಕರ ಜೊತೆ ಹೂಡಿಕೆ ಒಪ್ಪಂದಕ್ಕೆ ಸಹಿ ಮಾಡಲಾಗಿದೆ ಎಂದರು.

