ಆರೋಗ್ಯದ ವ್ಯಾಪಾರೀಕರಣದ ವಿರುದ್ದ ಜನತೆ ಸಂಘಟಿತರಾಗಬೇಕು: ಮುನೀರ್ ಕಾಟಿಪಳ್ಳ

ಆರೋಗ್ಯದ ವ್ಯಾಪಾರೀಕರಣದ ವಿರುದ್ದ ಜನತೆ ಸಂಘಟಿತರಾಗಬೇಕು: ಮುನೀರ್ ಕಾಟಿಪಳ್ಳ


ಮಂಗಳೂರು: ಸೇವಾಕ್ಷೇತ್ರವಾಗಿದ್ದ ಆರೋಗ್ಯ ರಂಗ ಇಂದು ವ್ಯಾಪಾರೀಕರಣಗೊಳ್ಳುತ್ತಿದೆ. ಇದರಿಂದಾಗಿ ಸರಕಾರಿ ಆಸ್ಪತ್ರೆಗಳು ದುರ್ಬಲಗೊಳ್ಳುತ್ತಿವೆ. ಪಿಪಿಪಿ ಹೆಸರಿನಲ್ಲಿ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳು ತಮ್ಮ ಅಧೀನಕ್ಕೆ ಪಡೆದುಕೊಳ್ಳುತ್ತಿವೆ. ಇದು ಆರೋಗ್ಯ ಕ್ಷೇತ್ರದಲ್ಲಿ ಬಿಕ್ಕಟ್ಟಿಗೆ ಕಾರಣವಾಗಿದೆ. ಖಾಸಗಿ ಆಸ್ಪತ್ರೆಗಳ ದುಬಾರಿ ವೆಚ್ಚ ಭರಿಸುವುದು ಸಾಮಾನ್ಯ ಜನತೆಗೆ ಅಸಾಧ್ಯವಾಗುತ್ತಿದೆ. ಆರೋಗ್ಯ ಕ್ಷೇತ್ರದ ವ್ಯಾಪಾರೀಕರಣದ ವಿರುದ್ದ ಜನತೆ ಸಂಘಟಿತರಾಗದಿದ್ದಲ್ಲಿ ಮುಂದಕ್ಕೆ ಮತ್ತಷ್ಟು ಅಪಾಯ ಕಾದಿದೆ ಎಂದು ಮುನೀರ್ ಕಾಟಿಪಳ್ಳ ಹೇಳಿದರು.

ಕಾಟಿಪಳ್ಳ ಜಾಸ್ಮಿನ್ ಸಭಾಂಗಣದಲ್ಲಿ, ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು, ಮಂಗಳೂರಿನಲ್ಲಿ ಕ್ಯಾನ್ಸರ್, ಹೃದಯದ ಆಸ್ಪತ್ರೆಗಳನ್ನು ಸ್ಥಾಪಿಸಬೇಕು ಎಂಬ ಬೇಡಿಕೆಯಡಿ ‘ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ ಹಮ್ಮಿಕೊಂಡಿರುವ ಅಭಿಯಾನವನ್ನು ಬೆಂಬಲಿಸಿ ಕಾಟಿಪಳ್ಳ ಎರಡನೇ ವಿಭಾಗದ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಅವರು ಮಾತಾಡುತ್ತಿದ್ದರು.

ಕವಿ ಹುಸೈನ್ ಕಾಟಿಪಳ್ಳ, ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿಯ ಪ್ರಮುಖರಾದ ಶ್ರೀನಾಥ್ ಕುಲಾಲ್, ಸಲೀಂ ಶ್ಯಾಡೊ, ಕಾಟಿಪಳ್ಳ ಮುಸ್ಲಿಂ ಜಮಾತ್ ಅಧ್ಯಕ್ಷರಾದ ರಹ್ಮತುಲ್ಲಾ ಮಾತನಾಡಿದರು. 

ಸಾಮಾಜಿಕ ಕಾರ್ಯಕರ್ತ, ಗಾಯಕ ಅಬ್ದುಲ್ ಸಮದ್ ಕಾಟಿಪಳ್ಳ ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಿಸಿದರು. ಹತ್ತಕ್ಕೂ ಹೆಚ್ಚು ಸಂಘ ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article