ಮನೋಬಲವನ್ನು ವೃದ್ಧಿಸಲು ಯೋಗ ಸಹಕಾರಿ: ಸ್ವಾಮಿ ಜಿತಕಾಮಾನಂದ ಜೀ ಮಹಾರಾಜ್

ಮನೋಬಲವನ್ನು ವೃದ್ಧಿಸಲು ಯೋಗ ಸಹಕಾರಿ: ಸ್ವಾಮಿ ಜಿತಕಾಮಾನಂದ ಜೀ ಮಹಾರಾಜ್


ಮಂಗಳೂರು: ಯೋಗವು ತನ್ನ ವ್ಯವಸ್ಥಿತ ಹಾಗೂ ಉದ್ದೇಶಿತ (ಸಂಕಲ್ಪಿತ) ಮನಸ್ಸನ್ನು ಶಾಂತಗೊಳಿಸುವ ಪ್ರಕ್ರಿಯೆಗಳಿಂದ ಮನಸ್ಸಿನಲ್ಲಿರುವ ನಿಶ್ಯಕ್ತತೆಗಳನ್ನು ಅಳಿಸಿ ಬಿಡುತ್ತದೆ. ದೃಢವಾದ ಮನೋಬಲವನ್ನು ಅಲ್ಲಿ ಉಂಟು ಮಾಡುತ್ತದೆ ಎಂದು ರಾಮಕೃಷ್ಣ ಮಠದ ಅಧ್ಯಕ್ಷ ಜಿತಕಾಮಾನಂದಜೀ ಮಹಾರಾಜ್ ಹೇಳಿದರು.

ಅವರು ಇಂದು ಜನವರಿ ತಿಂಗಳ ಎರಡು ವಾರಗಳ ಕಾಲ ನಡೆಯುವ ಯೋಗ ಶಿಬಿರವನ್ನು ಮಂಗಳಾದೇವಿ ಸಮೀಪ ರಾಮಕೃಷ್ಣ ಮಠದಲ್ಲಿ ಉದ್ಘಾಟಿಸಿ ಮಾತನಾಡಿದರು.

ಯೋಗ ಉಸಿರಾಟವನ್ನು ನಿಧಾನಗೊಳಿಸುತ್ತದೆ ಮತ್ತು ಸಮತೋಲನವನ್ನು ಕಾಯ್ದುಕೊಳ್ಳುತ್ತದೆ. ಸೃಜನ ಶೀಲತ್ವ ಮತ್ತು ಮನೋಬಲವನ್ನು ವೃದ್ಧಿಸುತ್ತದೆ. ಬುದ್ಧಿ ಶಕ್ತಿಯನ್ನು ಹರಿತಗೊಳಿಸುತ್ತದೆ ಹಾಗೂ ಮನಸ್ಸನ್ನು ಶಾಂತಗೊಳಿಸುತ್ತದೆ. ಇಮೋಷನಲ್ ಲೆವೆಲ್ (ಭಾವನಾತ್ಮಕ ಹಂತ) ಅದು ಜೀವನದಲ್ಲಿ ಸಂತೋಷ (ಆನಂದ)ವನ್ನು ಮತ್ತು ಸ್ಥಿತ ಪ್ರಜ್ಞತೆ ಹೆಚ್ಚಿಸುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದೇಲಂಪಾಡಿ ಯೋಗ ಪ್ರತಿಷ್ಠಾನದ ಯೋಗ ಗುರು ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಶಿಬಿರಾರ್ಥಿಗಳಿಗೆ ಯೋಗದ ಮಹತ್ವ ಮತ್ತು ಮುದ್ರೆಗಳ ಪ್ರಯೋಜನಗಳನ್ನು ತಿಳಿಸಿದ ಅವರು ನಮ್ಮ ಭಾರತೀಯ ಸಂಸ್ಕೃತಿಯ ಕಲೆಯಾದ ಪತಂಜಲಿ ಋಷಿ ಮಹರ್ಷಿಗಳು ತಿಳಿಸಿದ ಅಷ್ಟಾಂಗ ಯೋಗಗಳನ್ನು (ಯಮ, ನಿಯಮ, ಆಸನ, ಪ್ರಾಣಾಯಾಮ, ಪ್ರತ್ಯಾಹಾರ, ಧಾರಣ, ಧ್ಯಾನ ಮತ್ತು ಸಮಾಧಿ) ತನ್ನ ಜೀವನದಲ್ಲಿ ಅಳವಡಿಸಿಕೊಡಾಗ ಜೀವನ ಶೈಲಿಯು ಉತ್ತಮಗೊಳ್ಳುವುದು ಎಂದು ತಿಳಿಸಿದರು.

ದೇಲಂಪಾಡಿಯವರ ಶಿಷ್ಯರಾದ ಸುಮಾ, ಚಂದ್ರಹಾಸ ಬಾಳ, ತುಕರಾಂ, ದಿನೇಶ, ಮನೋಹರ ಮತ್ತು ಪ್ರೇಮ ಸಹಕರಿಸಿದರು.

ಆಸಕ್ತರು ಸಂಜೆ 5 ಗಂಟೆಯಿಂದ ನಡೆಸುವ ರಾಮಕೃಷ್ಣ ಮಠದ ಯೋಗ ಹಾಲ್‌ನಲ್ಲಿ ಭಾಗವಹಿಸಲು ಹೆಸರು ನೊಂದಾಯಿಸಿಕೊಳ್ಳಬಹುದು. ಆಸಕ್ತರು ಶಿಬಿರದಲ್ಲಿ ಭಾಗವಹಿಸಲು ಮಠವನ್ನು ಸಂಪರ್ಕಿಸಬಹುದಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article