ಅಪಘಾತ: ಬೌನ್ಸರ್ ಯುವಕ ಸಾವು

ಅಪಘಾತ: ಬೌನ್ಸರ್ ಯುವಕ ಸಾವು

ಮಂಗಳೂರು: ಕೇರಳದ ಕೊಟ್ಟಾಯಂನಲ್ಲಿ ಕಾರೊಂದು ಅಪಘಾತಕ್ಕೀಡಾಗಿ ಸುರತ್ಕಲ್ ಕಾನ ನಿವಾಸಿ ಬೌನ್ಸರ್ ಯುವಕ ಮೃತಪಟ್ಟು, ನಾಲ್ವರು ಗಾಯಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಮೂಲತಃ ಮುಲ್ಕಿ ತಾಲೂಕಿನ ಅಂಗರಗುಡ್ಡೆ ನಿವಾಸಿ, ಪ್ರಸಕ್ತ ಕಾನದ ಚಿರಾಗ್ ಫ್ಲ್ಯಾಟ್ ನಲ್ಲಿ ವಾಸವಿದ್ದ ಶಾನವಾಝ್ ಯಾನೆ ಶಮೀಮ್ (32) ಮೃತಪಟ್ಟವರು. 

ಇವರ ಜೊತೆ ಕಾರಿನಲ್ಲಿದ್ದ ಕಾಟಿಪಳ್ಳದ ಸಿರಾಜ್, ಕಾನ ನಿವಾಸಿ ಅಶ್ಫಾಕ್, ಸೂರಿಂಜೆ ನಿವಾಸಿ ಶಬೀರ್ ಹಾಗೂ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಸಿರಾಜ್ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. 

ಶಮೀಮ್ ಸೇರಿದಂತೆ ಐವರು ಕೇರಳದ ಕೊಟ್ಟಾಯಂನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದಕ್ಕೆ ಬೌನ್ಸರ್‌ಗಳಾಗಿ ತೆರಳಿದ್ದರು ಎನ್ನಲಾಗಿದೆ. ಅಲ್ಲಿ ಇಂದು ಬೆಳಗ್ಗೆ ಉಪಹಾರ ಸೇವಿಸಲೆಂದು ಕಾರಿನಲ್ಲಿ ಪೇಟೆ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇಕ್ಕಟ್ಟಾದ ರಸ್ತೆಯಲ್ಲಿ ನಿಯಂತ್ರಣ ಕಳೆದುಕೊಂಡ ಕಾರು ಸುಮಾರು 20 ಅಡಿ ಆಳಕ್ಕೆ ಉರುಳಿಬಿದ್ದಿದೆ.

ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶಾನವಾಝ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸಿರಾಜ್ ರಿಗೆ ಗಂಭೀರ ಗಾಯಗಾಳಾಗಿದ್ದು, ಅವರನ್ನು ಮಂಗಳೂರಿಗೆ ಕರೆತಂದು ತೇಜಸ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article