ಇರುವೈಲು: 76ನೇ ವರ್ಷದ  ಭಜನಾ ಮಂಗಲೋತ್ಸವ ಸಂಪನ್ನ

ಇರುವೈಲು: 76ನೇ ವರ್ಷದ ಭಜನಾ ಮಂಗಲೋತ್ಸವ ಸಂಪನ್ನ


ಮೂಡುಬಿದಿರೆ: ಇರುವೈಲು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ 76ನೇ ವರ್ಷದ ಭಜನಾ ಮಂಗಲೋತ್ಸವವು ಬುಧವಾರ ನಡೆಯಿತು.

ದೇವಳದ ಪ್ರಧಾನ ಅರ್ಚಕ ಐ. ರಾಘವೇಂದ್ರ ಆಸ್ರಣ್ಣ ದೀಪ ಬೆಳಗಿಸಿ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ನಂತರ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ಭಜನಾ ಮಂಡಳಿಯ ಅಧ್ಯಕ್ಷ ಬಾಲಚಂದ್ರ ಶೆಟ್ಟಿ, ಭಜನಾ ಮಂಡಳಿ ಉಪಾಧ್ಯಕ್ಷ ಪ್ರಶಾಂತ ಆಚಾರ್ಯ,  ಕಾರ್ಯದರ್ಶಿ ನಾರಾಯಣ ದೇವಾಡಿಗ, ಸುಜಿತ್ , ಕೋಶಾಧಿಕಾರಿಗಳಾದ ಪ್ರಭಾಕರ ಆಚಾರ್ಯ, ಸಂದೀಪ್ ಪೂವಣಿಬೆಟ್ಟು , ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಪೂವಪ್ಪ ಸಾಲ್ಯಾನ್, ಶುಭಕರ ಕಾಜವ, ಪ್ರದೀಪ್ ಶೆಟ್ಟಿ, ಪದ್ಮನಾಭ ಪೂಜಾರಿ, ಮೋಹನ್ ನಾಯಕ್, ಶಿವಾನಂದ ನಾಯ್ಕ್, ದೀಪಾ ದಿನೇಶ್, ಭಜನಾ ಮಂಡಳಿಯ ಭಜಕರು, ಮತ್ತಿತರರು ಭಾಗವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article