ಡಾ.ಕಲ್ಲಡ್ಕ ಪ್ರಭಾಕರ ಭಟ್‌ಗೆ ಮತ್ತೊಂದು ಸಂಕಷ್ಟ: ಧ್ವೇಷಭಾಷಣ-ಮಾನವಬಂಧುತ್ವ ವೇದಿಕೆ ದೂರು

ಡಾ.ಕಲ್ಲಡ್ಕ ಪ್ರಭಾಕರ ಭಟ್‌ಗೆ ಮತ್ತೊಂದು ಸಂಕಷ್ಟ: ಧ್ವೇಷಭಾಷಣ-ಮಾನವಬಂಧುತ್ವ ವೇದಿಕೆ ದೂರು


ಪುತ್ತೂರು: ತಾಲೂಕಿನ ಉಪ್ಪಳಿಗೆ ಎಂಬಲ್ಲಿ ದೀಪಾವಳಿ ಕಾರ್ಯಕ್ರಮದಲ್ಲಿ ಮಹಿಳೆಯರ ಬಗ್ಗೆ ಕೀಳು ಮಟ್ಟದ ಮಾತುಗಳನ್ನು ಆಡುವ ಮೂಲಕ ಸಮಾಜದ ಶಾಂತಿಗೆ ಧಕ್ಕೆ ತಂದಿದ್ದಾರೆ ಎನ್ನುವ ಆರೋಪದ ಹಿನ್ನಲೆಯಲ್ಲಿ ಜಾಮೀನು ಪಡೆಯಲು ತಿಂಗಳ ಕಾಲ ಒದ್ದಾಡಿದ್ದ  ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ನ್ಯಾಯಾಲಯದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂಬ ಷರತ್ತುಬದ್ಧ ಜಾಮೀನು ಪಡೆದುಕೊಂಡಿದ್ದ ಅವರ ಮೇಲೆ ಇದೀಗ ಪುತ್ತೂರಿನ ಮಾನವ ಬಂಧುತ್ವ ವೇದಿಕೆ ಪುತ್ತೂರು ನಗರಠಾಣೆಗೆ ದೂರು ನೀಡಿದೆ. 

ಜ.12ರಂದು ವಿವೇಕಾನಂದ ಕಾಲೇಜಿನಲ್ಲಿ ನಡೆದ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮತ್ತೊಮ್ಮೆ ಧ್ವೇಷ ಭಾಷಣ ಮಾಡಿದ್ದಾರೆ. ಪೋಷಕರು ಹಾಗೂ ಹದಿಹರೆಯದ ಬಾಲಕ-ಬಾಲಕಿಯರಿದ್ದ ಈ ಕಾರ್ಯಕ್ರಮದಲ್ಲಿ ನಾಗರಿಕ ಸಮುದಾಯಗಳ ನಡುವೆ ಪರಸ್ಪರ ಧ್ವೇಷ ಉಂಟಾಗುವ ರೀತಿಯಲ್ಲಿ ಮಾತನಾಡಿದ್ದಾರೆ. ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಜನಾಂಗಕ್ಕೆ ನಿಂದನೆ ಮಾಡಿದ್ದಾರೆ. ಕಪೋಲಕಲ್ಪಿತ ಕಥೆ ಹೇಳಿ ಹಿಂದೂಗಳನ್ನು ಕ್ರಿಶ್ಚಿಯನ್ನರ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ. ಆ ಮೂಲಕ ಸಮಾಜದಲ್ಲಿ ಧ್ವೇಷ ಮತ್ತು ಹಿಂಸೆಯನ್ನು ಪ್ರೇರೇಪಿಸುವ ಕೆಲಸ ಮಾಡಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರನ್ನು ಬಂಧಿಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಬಂಧುತ್ವ ವೇದಿಕೆಯ ತಾಲೂಕು ಸಮಿತಿ ಆಗ್ರಹಿಸಿದೆ. 

ಯೂಟ್ಯೂಬ್ ಚಾನೆಲ್ ವಿರುದ್ಧ ದೂರು:

ಈ ಧ್ವೇಷ ಭಾಷಣವನ್ನು ಪ್ರಸಾರ ಮಾಡಿದ ಯೂಟ್ಯೂಬ್ ಚಾನೆಲ್ ಮೇಲೆಯೂ ಸೂಕ್ತಕ್ರಮ ಕೈಗೊಳ್ಳಬೇಕು. ಎಳೆಯ ಮಕ್ಕಳು ಹಾಗೂ ಸಾರ್ವಜನಿಕರು ಈ ಚಾನೆಲ್ ನ್ನು ನೋಡಿದ್ದಾರೆ. ಸಮಾಜದ ಮೇಲೆ ದುಷ್ಪರಿಣಾಮ ಉಂಟು ಮಾಡುವ ಇಂತಹ ಮಾತುಗಳನ್ನು ಚಾನೆಲ್ ಪ್ರಸಾರ ಮಾಡಿದೆ. ಹಾಗಾಗಿ ಈ ಚಾನೆಲ್ ವಿರುದ್ಧ ಕಾನೂನುಕ್ರಮ ಕೈಗೊಂಡು ನ್ಯಾಯ ಒದಗಿಸುವಂತೆ ಬಂಧುತ್ವ ವೇದಿಕೆಯ ತಾಲೂಕು ಸಮಿತಿ ಅಧ್ಯಕ್ಷ ಅಮಳ ರಾಮಚಂದ್ರ ಕೆ ಅವರು ಪೊಲೀಸ್ ಇಲಾಖೆಗೆ ದೂರು ನೀಡಿದ್ದಾರೆ.

ಈ ಸಂದರ್ಭ ಬಂಧುತ್ವ ವೇದಿಕೆಯ ಮುಖಂಡರಾದ ಎಂ.ಬಿ ವಿಶ್ವನಾಥ ರೈ, ಮೌರೀಸ್ ಮಸ್ಕರೇನಸ್, ಎಚ್.ಮಹಮ್ಮದ್ ಆಲಿ, ಡಾ.ರಾಜಾರಾಮ್ ಕೆ.ಬಿ, ಕೆನ್ಯೂಟ್ ಮಸ್ಕರೇನಸ್, ಬೋಲೋಡಿ ಚಂದ್ರಹಾಸ ರೈ, ಶಶಿಕಿರಣ್ ರೈ, ಅಬ್ದುಲ್ ರಹಿಮಾನ್ ಯೂನಿಕ್, ಉಲ್ಲಾಸ್ ಕೋಟ್ಯಾನ್ ಹಾಗೂ ಪ್ರಕಾಶ ಗೌಡ ತೆಂಕಿಲ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article