ಒಳಮೊಗ್ರು ಅಧ್ಯಕ್ಷೆ ದೆಹಲಿ ಗಣರಾಜ್ಯೋತ್ಸವಕ್ಕೆ
Sunday, January 4, 2026
ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್ನ ಅಧ್ಯಕ್ಷೆ ತ್ರಿವೇಣಿ ಪಲ್ಲತ್ತಾರು ಅವರು ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.
ಗ್ರಾ.ಪಂ.ನಲ್ಲಿ ಸ್ವಚ್ಛತೆ, ಅಭಿವೃದ್ಧಿ ಕಾರ್ಯಗಳಲ್ಲಿ ಗುರುತಿಸಿಕೊಂಡಿರುವ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಯಾಗಿಯೂ ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ.