ರಸ್ತೆ ಸುರಕ್ಷತಾ ಮಾಸಾಚರಣೆ

ರಸ್ತೆ ಸುರಕ್ಷತಾ ಮಾಸಾಚರಣೆ


ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ, ಸಾರಿಗೆ ಇಲಾಖೆ ಹಾಗೂ ದಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇವರ ಸಂಯುಕ್ತಾಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಮಂಗಳವಾರ  ನಡೆಯಿತು.

ನಗರದ  ಪುರಭವನದಿಂದ ಸ್ಟೇಟ್ಬ್ಯಾಂಕ್ವರೆಗೆ ನಡೆದ  ರಸ್ತೆ ಸುರಕ್ಷತಾ ಜಾಥಾಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ   ಸದಸ್ಯ ಕಾರ್ಯದರ್ಶಿ  ಜೈಬುನ್ನೀಸಾ ಚಾಲನೆ ನೀಡಿದರು.

ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿ  ಮುರಗೇಂದ್ರ ಬಸವರಾಜ  ಶಿರೋಳಕರ, ಸಂಚಾರ ಪೋಲಿಸ್ ಉಪವಿಭಾಗದ ಸಹಾಯಕ ಆಯುಕ್ತೆ  ನಜ್ಮಾ ಫಾರೂಖಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ನ್ಯಾಯವಾದಿ ಮಾನಸ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article