ನೊಂದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ: ಇಬ್ಬರ ಬಂಧನ

ನೊಂದ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ವಂಚನೆ: ಇಬ್ಬರ ಬಂಧನ


ಮಂಗಳೂರು: ಮೊಂದ ಮಹಿಳೆಗೆ ಮ್ಯಾಟ್ರಮೋನಿಯಲ್ಲಿ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ, ಹಂತ ಹಂತವಾಗಿ 6,60,000 ರೂ. ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸುಶಾಂತ್ ಪೂಜಾರಿ ಯಾನೆ ಸುಶಾಂತ್ ಅಂಕುಶ್ ಪೂಜಾರಿ ಯಾನೆ ಸುಶಾಂತ್ ಜಿ. ಕರ್ಕೇರಾ (32) ಹಾಗೂ ಮೂಲ್ಕಿ ನಿವಾಸಿ ಭಾಸ್ಕರ್ ಎಂದು ಗುರುತಿಸಲಾಗಿದೆ.

ಪ್ರಕರಣದ ವಿವರ:

ನೊಂದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿ ಮ್ಯಾಟ್ರಮೋನಿ ಆನ್‌ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯವಾಗಿ ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈನಲ್ಲಿ 02-02-2025 ರಲ್ಲಿ ಮದುವೆಯಾಗಿದ್ದಲ್ಲದೆ ನಂಬಿಸಿ ಹಂತ ಹಂತವಾಗಿ 6,60,00) ರೂ. ಹಣವನ್ನು ಪಡೆದುಕೊಂಡು ಮೋಸ ಮಾಡುವ ಉದ್ದೇಶದಿಂದ 15-11-2025 ರಂದು ನಾಪತ್ತೆಯಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ. 

ಈ ಪ್ರಕರಣದಲ್ಲಿನ ಆರೋಪಿ ಸುಶಾಂತ್ ಪೂಜಾರಿ ಫೆ.5 ರಂದು ಪತ್ತೆ ಹಚ್ಚಿ ಬಂಧಿಸಿದ್ದು, ವಿಚಾರಣೆ ನಡೆಸಿದಾಗ ಆರೋಪಿಯೂ ಮ್ಯಾಟ್ರಮೋನಿ ಆನ್‌ಲೈನ್ ಪ್ಲಾಟ್ ಫಾರಂ ಮೂಲಕ ಪರಿಚಯಮಾಡಿಕೊಂಡು ಈ ಮೊದಲು 2021ರಲ್ಲಿ ಉಡುಪಿಯ ಹುಡುಗಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಹಾಗೂ ಉಡುಪಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದುಕೊಂಡಿರುತ್ತಾನೆ. ಮುಂಬೈನ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ. ಬೆಂಗಳೂರಿನಲ್ಲಿ 2 ಜನ ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿರುತ್ತಾನೆ ಕಾರ್ಕಳದ ಒಂದು ಹುಡುಗಿಗೆ ಮದುವೆ ಆಗುವುದಾಗಿ ನಂಬಿಸಿ ಮೊಸ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾನೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article