ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿಯ ಕಾಲ್ನಾಡಿಗೆ ಜಾಥಾ

ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿಯ ಕಾಲ್ನಾಡಿಗೆ ಜಾಥಾ


ಮಂಗಳೂರು: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬಿಜೆಪಿ ಜಿಲ್ಲಾ ಕಚೇರಿ ಬಳಿಯಿಂದ ಮ.ನ.ಪಾ ಕಚೇರಿ ವರೆಗೆ ಬೃಹತ್ ಕಾಲ್ನಾಡಿಗೆ ಜಾಥಾ ನಡೆಯಿತು.


ಈ ವೇಳೆ ಮಾತಾಡಿದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ಸ್ವತಃ ರಾಜೀವ್ ಗಾಂಧಿಯೇ ತಮ್ಮ ಸರಕಾರ ಒಂದು ರೂಪಾಯಿ ಕೊಟ್ರೆ ಅದರಲ್ಲಿ ಕೆಲವೇ ಪೈಸೆ ಮಾತ್ರ ಜನರಿಗೆ ತಲುಪುತ್ತದೆ ಎಂದು ಹೇಳಿ ವೈಫಲ್ಯ ವ್ಯಕ್ತಪಡಿಸಿದ್ದರು. ಆದರೆ ಈಗ ಒಂದೇ ಒಂದು ರೂಪಾಯಿ ಭ್ರಷ್ಟಾಚಾರಕ್ಕೂ ಆಸ್ಪದವಿಲ್ಲದೆದೇ ನರೇಂದ್ರ ಮೋದಿ ಸರ್ಕಾರ ಆಡಳಿತ ನಡೆಸುತ್ತಿದೆ. ಅದರ ಮುಂದುವರಿದ ಭಾಗವೇ ವಿಬಿ ಜಿ ರಾಮ್ ಜಿ. ವಿಧಿಯಿಲ್ಲದೇ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಅಷ್ಟೇ ಎಂದರು.


ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ವಿಬಿ-ಜಿ ರಾಮ್‌ ಜಿ ಕಾಯ್ದೆ ಮೂಲಕ ಬಡವರಿಗೆ ದುಡಿಯಲು ಹೆಚ್ಚಿನ ಅವಕಾಶ ನೀಡಿದರೂ ಕಾಂಗ್ರೆಸ್ಸಿಗರು ವಿರೋಧಿಸುತ್ತಿದ್ದಾರೆ ಎಂದರೆ ಅವರ ಉದ್ದೇಶ ಬೇರೆ ಏನೋ ಇದೆ. ದುಡಿಯುವ ದಿನವನ್ನು 100 ರಿಂದ 125 ಕ್ಕೆ ಏರಿಸಿದ್ದು ತಪ್ಪಾ ? ಇದರಿಂದ ಕಾಂಗ್ರೆಸ್ಸಿಗೆ ಏನು ತೊಂದರೆ? ಬಡ ಜನರ ಅಭಿವೃದ್ಧಿಗಾಗಿರುವ ವಿಬಿ-ಜಿ ರಾಮ್ ಜಿ ಯೋಜನೆ ವಿರುದ್ದ ಸುಳ್ಳು ಸುದ್ದಿ ಹಬ್ಬಿಸುವ ಕಾಂಗ್ರೆಸ್ಸಿಗರನ್ನು ನಂಬದಿರೋಣ. ಮನರೇಗಾ ಹೆಸರಿನಲ್ಲಿ ಸಾವಿರಾರು ಕೋಟಿ ಭ್ರಷ್ಟಾಚಾರವಾಗಿದೆ. ಇನ್ನು ಮೇಲೆ ಅದಕ್ಕೆ ಅವಕಾಶವಿಲ್ಲದಿರುವುದೇ ಕಾಂಗ್ರೆಸ್ಸಿಗರ ಅಸಹನೆಗೆ ಕಾರಣವಾಗಿದೆ. ಈ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಜನರು ರೋಸಿ ಹೋಗಿದ್ದು, ಇ -ಖಾತಾ ಸಿಗದೇ, ಜೈಲ್ ಜಾಮರ್ ನಿಂದ ಜನರು ತೊಂದರೆ ಅನುಭವಿಸುತ್ತಿರುವಾಗ, ಕೆಂಪು ಕಲ್ಲು,- ಮರಳು ಸಿಗದೇ ಒದ್ದಾಡುತ್ತಿದ್ದಾಗ ಈ ಕಾಂಗ್ರೆಸ್ ನವರು ಪಾದಯಾತ್ರೆ ಮಾಡಿದ್ರಾ? ಪ್ರಿಯಾಂಕ್ ಖರ್ಗೆ ನಮ್ಮ ಕರಾವಳಿ ಬಗ್ಗೆ ಹೇಳಿಕೆ ನೀಡುವ ಮೊದಲು ಅವರ ಜಿಲ್ಲೆಗಿಂತ ನಮ್ಮ ಈ ಭಾಗ ಎಷ್ಟು ಮುಂದುವರಿದಿದೆ ಎಂಬುದನ್ನು ತಿಳಿದುಕೊಳ್ಳಲಿ. ಐಟಿ, ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಈ ಭಾಗ ನೀಡಿದ ಕೊಡುಗೆಯನ್ನು ಅರಿಯಲಿ ಎಂದರು. 

ಪ್ರಮುಖರಾದ ರಮೇಶ್ ಕಂಡೆಟ್ಟು, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ತಿಲಕ್ ರಾಜ್ ಕೃಷ್ಣಾಪುರ, ಪೂರ್ಣಿಮಾ ಎಂ., ಸಂಜಯ್ ಪ್ರಭು, ಶಾನವಾಜ್, ಜಗನ್ನಾಥ್, ಸುಧೀರ್ ಶೆಟ್ಟಿ ಕಣ್ಣೂರು, ನಂದನ್ ಮಲ್ಯ, ವಸಂತ್ ಜೆ.ಪೂಜಾರಿ, ರವಿಶಂಕರ್ ಮಿಜಾರ್, ನಿತಿನ್ ಕುಮಾರ್, ವಿಜಯ್ ಕುಮಾರ್ ಶೆಟ್ಟಿ, ಅಶ್ವಿತ್ ಕೊಟ್ಟಾರಿ, ರಾಜಗೋಪಾಲ್ ರೈ, ನಿಕಟಪೂರ್ವ ಪಾಲಿಕೆ ಸದಸ್ಯರುಗಳು, ಬಿಜೆಪಿ ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರು, ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article