ವಿಕಸಿತ ಭಾರತಕ್ಕೆ ಭದ್ರ ತಳಹದಿ: ನಳಿನ್ ಕುಮಾರ್ ಕಟೀಲ್
Sunday, February 1, 2026
ಮಂಗಳೂರು: ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸಲು ಈ ಬಜೆಟ್ ಭದ್ರ ತಳಹದಿಯಾಗಿದೆ ಎಂದು ಮಾಜಿ ಸಂಚದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಕೃಷಿ, ಶಿಕ್ಷಣ, ಕೈಗಾರಿಕೆ, ಗ್ರಾಮೀಣಾಭಿವೃದ್ಧಿ, ಪ್ರವಾಸೋದ್ಯಮ ಸಹಿತ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವ, ದೇಶದ ಸರ್ವಾಂಗೀಣ ಪ್ರಗತಿಗೆ ಪೂರಕವಾದ ಬಜೆಟ್ ಮಂಡನೆಯಾಗಿದೆ. ತೆಂಗಿನಕಾಯಿ, ಕೋಕೋ ಬೆಳೆಗಳಿಗೆ ಆರ್ಥಿಕ ಬೆಂಬಲ ನೀಡುವ ಮೂಲಕ ಕೃಷಿ ಅಭಿವೃದ್ಧಿಗೆ ಉತ್ತೇಜಿಸಿರುವುದು ಕರಾವಳಿ ಭಾಗದ ಕೃಷಿಕರಿಗೆ ವರದಾನವಾಗಲಿದೆ.
ಮೀನುಗಾರಿಕಾ ಕ್ಷೇತ್ರವನ್ನು ಬಲಪಡಿಸಲು ಸುಂಕ ವಿನಾಯಿತಿ, ಸಮುದ್ರ ಉತ್ಪನ್ನಗಳ ರಫ್ತು ಹೆಚ್ಚಳ ಘೋಷಿಸಿರುವುದು ಸ್ವಾಗತಾರ್ಹ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಆಮೆ ಹಾದಿಗಳನ್ನು ಅಭಿವೃದ್ಧಿ ಪಡಿಸುವ ಯೋಜನೆ ಘೋಷಿಸಿದ್ದು ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ನೀಡಲಿದೆ. ಬಡವರ, ಮಧ್ಯಮ ವರ್ಗದವರ, ಮಹಿಳೆಯರ, ಯುವಕರ ಹಿತ ಕಾಯುವ ಸರ್ವ ಸ್ಪರ್ಶಿ ಬಜೆಟ್ ಇದು ಎಂದು ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.