ನೂತನ ರಂಗ ಮಂಟಪ ಲೋಕಾರ್ಪಣೆ
ಬಳಿಕ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, "ಕಲಿತ ಸರ್ಕಾರಿ ಶಾಲೆಯ ಬಗ್ಗೆ ಹೆಮ್ಮೆ ಭಾವನೆ ಇದ್ದರೆ, ಆ ಶಿಕ್ಷಣ ಸಂಸ್ಥೆ ಹೇಗೆ ಅಭಿವೃದ್ಧಿಪಡಿಸಬಹುದು ಎಂಬುದಕ್ಕೆ ಈ ಶಾಲೆ ಉದಾಹರಣೆ. ಐದಾರು ವರ್ಷಗಳಲ್ಲಿ ಶಾಲೆ ಅಭೂತಪೂರ್ವ ಬೆಳವಣಿಗೆ ಕಂಡಿದೆ. ಎರಡು ವಿವೇಕ ಕೊಠಡಿಗಳಿಗೆ 45 ಲಕ್ಷ ರೂ. ಅನುದಾನವೂ ಸೇರಿದಂತೆ 1 ಕೋಟಿ ರೂ.ಗೂ ಹೆಚ್ಚು ಅನುದಾನ ಶಾಲೆಗೆ ಬಂದಿದೆ" ಎಂದರು.
"ಮಕ್ಕಳಿಗೆ ಸುಂದರ ವಾತಾವರಣ ಕೊಡಬೇಕು ಅವಕಾಶ ಕಲ್ಪಿಸಬೇಕು ಎಂಬ ಕಾರಣಕ್ಕೆ ಈ ಭಾಗದ ಬಂಧುಮಿತ್ರರು ಹಳೆವಿದ್ಯಾರ್ಥಿಗಳು ದುಡಿಯುತ್ತಿದ್ದಾರೆ. ಈ ಶಾಲೆಯಲ್ಲಿ ವಿದ್ಯಾರ್ಥಿ ಸಂಖ್ಯೆ ವೃದ್ಧಿಯಾಗುತ್ತಿದೆ. ವಿದ್ಯಾರ್ಥಿಗಳು ಶಾಲೆಗೆ ಹೆಸರು ತರುವ ಕೆಲಸ ಮಾಡುತ್ತಿದ್ದಾರೆ. ಇನ್ನಷ್ಟು ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಗೆ ಬರುವಂತೆ ಮಾಡುವ ಜವಾಬ್ದಾರಿ ಅಧ್ಯಾಪಕ ವೃಂದದ ಮೇಲಿದೆ" ಎಂದರು.
ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಮೇಶ್ ಕಂಡೆಟ್ಟು ಮಾತನಾಡಿದರು.
ಎಸ್ ಡಿಎಂಸಿ ಅಧ್ಯಕ್ಷೆ ಸಂಧ್ಯಾ ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಸಂಜೀವ ಮರೋಳಿ, ನಿಕಟಪೂರ್ವ ಪಾಲಿಕೆ ಸದಸ್ಯೆ ಕಾವ್ಯಾ ನಟರಾಜ್, ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ಶೆಟ್ಟಿ, ಮುಖ್ಯ ಶಿಕ್ಷಕಿ ರಾಜೀವಿ ಎಂ., ಪ್ರಮುಖರಾದ ಡಾ.ಗಣೇಶ್ ಕುಮಾರ್, ಪೋಷಕಿ ಸಬಿತಾ ಸಂತೋಷ್ ಕುಮಾರ್, ಪದವು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಕುಮುದಿನಿ ಭಾಗವಹಿಸಿದ್ದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಶೈಲಜಾ ಸುರೇಶ್ ಸ್ವಾಗತಿಸಿದರು. ಶಿಕ್ಷಕ ಚಂದ್ರಶೇಖರ ಶೆಟ್ಟಿ ವಂದಿಸಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ಆಕರ್ಷಕ ಹುಲಿ ವೇಷ ಕುಣಿತ ಪ್ರದರ್ಶಿಸಿದರು.
