ಆಟೋ ಪಾರ್ಕ್ ಅಭಿವೃದ್ಧಿಗೆ ಶಾಸಕ ಕಾಮತ್ ನೇತೃತ್ವದಲ್ಲಿ ಶಿಲನ್ಯಾಸ
Tuesday, February 17, 2026
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 40ನೇ ಕೋರ್ಟ್ ವಾರ್ಡಿನ ಸೆಂಟ್ರಲ್ ರೈಲ್ವೆ ನಿಲ್ದಾಣದ ಎದುರು ರಿಕ್ಷಾ ಮಾಲಕ-ಚಾಲಕರ ಹಾಗೂ ಸಾರ್ವಜನಿಕರ ಬೇಡಿಕೆಯ ಮೇರೆಗೆ 18 ಲಕ್ಷ ರೂ. ವಿಶೇಷ ಅನುದಾನದಲ್ಲಿ ಆಟೋ ಪಾರ್ಕ್ ಅಭಿವೃದ್ಧಿಗೊಳ್ಳಲಿದ್ದು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಶಿಲನ್ಯಾಸ ನಡೆಯಿತು.
ಬಳಿಕ ಅವರು ಮಾತನಾಡಿ, ಇಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಮೇಲ್ಛಾವಣಿಯಿಂದಾಗಿ ರಿಕ್ಷಾ ಚಾಲಕರು ಉರಿ ಬಿಸಿಲು ಹಾಗೂ ಮಳೆಗಾಲದಲ್ಲಿ ಆಶ್ರಯ ಪಡೆಯಲು ಅನುಕೂಲವಾಗಲಿದೆ. ಇಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ರೈಲ್ವೆ ಇಲಾಖೆಯ ಅನುಮತಿ ಕಡ್ಡಾಯವಾಗಿದ್ದು, ಆ ನಿಟ್ಟಿನಲ್ಲಿ ನಮ್ಮ ಮನವಿಗೆ ಸಂಪೂರ್ಣ ರೀತಿಯಲ್ಲಿ ಸಹಕಾರದ ನೀಡಿದ ರೈಲ್ವೆ ಅಧಿಕಾರಿ ಯಾಧವ್ ರಿಗೆ ವಿಶೇಷ ಧನ್ಯವಾದಗಳು. ಮುಂದಿನ ದಿನಗಳಲ್ಲಿ ಇಲ್ಲಿಗೊಂದು ಕುಡಿಯುವ ಶುದ್ಧ ನೀರಿನ ಘಟಕವನ್ನೂ ಸಹ ನಿರ್ಮಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಂಡಲದ ಪ್ರಧಾನ ಕಾರ್ಯದರ್ಶಿ ಲಲ್ಲೇಶ್ ಕುಮಾರ್, ಅನಿಲ್ ಹೊಯ್ಗೆ ಬಜಾರ್, ದಯಾನಂದ್, ಸುಶೀಲ್, ನೆಲ್ಸನ್, ಮಂಜುನಾಥ್, ಶರಣ್, ಮೋಹನ್, ಸ್ಥಳೀಯ ನಿವಾಸಿಗಳು, ವಾರ್ಡಿನ ಕಾರ್ಯಕರ್ತರು ಉಪಸ್ಥಿತರಿದ್ದರು.
