ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬಿಜೆಪಿಯಿಂದ ಬೃಹತ್ ಪಾದಯಾತ್ರೆ
Sunday, February 15, 2026
ಮೂಡುಬಿದಿರೆ: ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರಂಟಿ ಅಡಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಠಾಚಾರ ತೊಡೆದು ಹಾಕಲು, ಕೇಂದ್ರ ಸರಕಾರದ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಲು ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಭಾರತೀಯ ಜನತಾ ಪಾಟಿ೯ ಮುಲ್ಕಿ-ಮೂಡುಬಿದಿರೆ ವತಿಯಿಂದ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಬಳಿಯಿಂದ ಪ್ರಾರಂಭವಾಗಿ ಕಿನ್ನಿಗೋಳಿ ಬಸ್ ನಿಲ್ದಾಣದವರೆಗೆ ಬೃಹತ್ ಪಾದಯಾತ್ರೆ ಭಾನುವಾರ ನಡೆಯಿತು.
ಕ್ಷೇತ್ರದ ಶಾಸಕ ಉಮಾನಾಥ ಎ. ಕೋಟ್ಯಾನ್, ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ಗಳಾದ ಹರಿಪ್ರಸಾದ್, ಪ್ರ. ಕಾಯ೯ದಶಿ೯ ರಂಜಿತ್ ಪೂಜಾರಿ, ಪ್ರಮುಖರಾದ ಭುವನಾಭಿರಾಮ ಉಡುಪ, ಸುನಿಲ್ ಆಳ್ವ, ಈಶ್ವರ ಕಟೀಲ್ ಮತ್ತಿತರರು ಈ ಸಂದಭ೯ದಲ್ಲಿದ್ದರು.
