ಮೂಡುಬಿದಿರೆ: ಗಾಂಧಿನಗರ ಸರ್ಕಾರಿ ಶಾಲೆಗೆ ಸ್ಮಾರ್ಟ್ ಟಿವಿ ಕೊಡುಗೆ
Tuesday, February 10, 2026
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಗಾಂಧಿನಗರಕ್ಕೆ ಜಯಾನಂದ ಬಂಗೇರ ಹಾಗೂ ಆಶಾ ದಂಪತಿ ಸ್ಮಾರ್ಟ್ ಟಿವಿಯನ್ನು ಕೊಡುಗೆಯಾಗಿ ನೀಡಿದರು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಭವ್ಯಾ ಅವರು ಸ್ಮಾರ್ಟ್ ಕ್ಲಾಸ್ನ ಮಹತ್ವ ಹಾಗೂ ಅದರ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.
ಎಸ್ಡಿಎಂಸಿ ಅಧ್ಯಕ್ಷೆ ಸುನೀತಾ ಶೆಟ್ಟಿ, ಮುಖ್ಯ ಶಿಕ್ಷಕಿ ಕಸ್ತೂರಿ ಹೆಚ್., ಶಿಕ್ಷಕಿಯರಾದ ಸುಪ್ರಿತಾ, ಅಕ್ಷತಾ, ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.