ಬಿಆರ್ ಪಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾಯ೯ಕ್ರಮ
Tuesday, February 10, 2026
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಡುಬಿದಿರೆ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮತ್ತು ಬಾಬು ರಾಜೇಂದ್ರ ಪ್ರೌಢಶಾಲೆ ಪ್ರಾಂತ್ಯ ಇದರ ಜಂಟಿ ಆಶ್ರಯದಲ್ಲಿ ನಡೆದಂತಹ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಜನ ಬೆಳ್ತಂಗಡಿ ಜಾಗೃತಿ ವೇದಿಕೆಯ ಶಿಬಿರಾಧಿಕಾರಿ ನಂದಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.
ಮುಖ್ಯ ಅತಿಥಿಯಾಗಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮೂಡುಬಿದಿರೆ ಉಪಾಧ್ಯಕ್ಷ ಪ್ರಸಾದ್ ಕುಮಾರ್, ಪ್ರಗತಿ ಬಂಧು ಹಾಗೂ ಸ್ವಸಹಾಯ ಒಕ್ಕೂಟದ ವಲಯಾಧ್ಯಕ್ಷ ಅರುಣ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶಿಕ್ಷಕ ಅನ್ನು ಎ ಸ್ವಾಗತಿಸಿದರು. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಡುಬಿದಿರೆ ವಲಯದ ಮೇಲ್ವಿಚಾರಕಿ ಸರಸ್ವತಿ ಕಾಯ೯ಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಅನಿತಾ ಬಲ್ಲಾಳ್ ವಂದಿಸಿದರು.
