ಅಳಿಯೂರು ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಗೆ ಉತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿ

ಅಳಿಯೂರು ಪ್ರೌಢಶಾಲೆಯ ಶಾಲಾಭಿವೃದ್ಧಿ ಸಮಿತಿಗೆ ಉತ್ತಮ ಎಸ್.ಡಿ.ಎಂ.ಸಿ ಪ್ರಶಸ್ತಿ


ಮೂಡುಬಿದಿರೆ: ಶಾಸಕ ಉಮಾನಾಥ ಕೋಟ್ಯಾನ್ ಅವರ ಸಹಕಾರದಲ್ಲಿ ಪ್ರದೀಪ್ ಕುಮಾರ್ ಅವರ ಅಧ್ಯಕ್ಷತೆಯ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳ ಮೂಲಕ ಗಮನಸೆಳೆದಿರುವ ಅಳಿಯೂರು ಹೈಸ್ಕೂಲ್ ನ ಎಸ್.ಡಿ.ಎಂ.ಸಿ. 2025- 26 ನೇ ಸಾಲಿನ ‘ಅತ್ಯುತ್ತಮ ಶಾಲಾಭಿವೃದ್ಧಿ ಸಮಿತಿ’ ಪ್ರಶಸ್ತಿಗೆ ಆಯ್ಕೆಯಾಗಿದೆ. 

ವಾಲ್ಪಾಡಿ ಪಂಚಾಯತ್ ಮಾಜಿ ಅಧ್ಯಕ್ಷರೂ ಆಗಿರುವ ಪ್ರದೀಪ್ ಕುಮಾರ್ ಅವರು ಈ ಪ್ರೌಢಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಬಳಿಕ ಸಮಗ್ರವಾಗಿ ಅಭಿವೃದ್ಧಿ ಕಂಡಿದೆ.


ಫಲಿತಾಂಶದಲ್ಲಿ ಕೂಡಾ ಒಳ್ಳೆಯ ಫಲಿತಾಂಶ ಪಡೆಯುತ್ತಿರುವ ಅಳಿಯೂರು ಹೈಸ್ಕೂಲ್ ನ ಪ್ರತಿಯೊಂದು ಕೆಲಸಗಳಲ್ಲೂ ಎಸ್ಡಿಎಂಸಿಯವರು ಕೈಜೋಡಿಸಿ ಅಭಿವೃದ್ಧಿಗೆ ಸಹಕರಿಸಿದ್ದಾರೆ.

ಅತ್ಯುತ್ತಮ ಎಸ್.ಡಿ.ಎಂ.ಸಿ‌ಯಾಗಿ ಆಯ್ಕೆಯಾಗುವಲ್ಲಿ ಪ್ರಮುಖ ಪಾತ್ರವಹಿಸಿದ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್, ಹಾಲಿ ಅಧ್ಯಕ್ಷರಾಗಿರುವ ರವೀಂದ್ರ, ಸದಸ್ಯರನ್ನು ವಿದ್ಯಾರ್ಥಿಗಳ ಪೋಷಕರು,ಶಿಕ್ಷಕ ವೃಂದ ಹಾಗೂ ವಿದ್ಯಾಭಿಮಾನಿಗಳು ಅಭಿನಂದಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article