ಬೈಕ್ ಡಿವೈಡರ್‌ಗೆ ಢಿಕ್ಕಿ: ವಿದ್ಯಾರ್ಥಿ ಮೃತ್ಯು ಇನ್ನೋರ್ವ ವಿದ್ಯಾರ್ಥಿ ಗಂಭೀರ

ಬೈಕ್ ಡಿವೈಡರ್‌ಗೆ ಢಿಕ್ಕಿ: ವಿದ್ಯಾರ್ಥಿ ಮೃತ್ಯು ಇನ್ನೋರ್ವ ವಿದ್ಯಾರ್ಥಿ ಗಂಭೀರ

ಬೆಳ್ತಂಗಡಿ: ಬೈಕೊಂದು ಸ್ಕಿಡ್ ಆಗಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟು, ಇನ್ನೋರ್ವ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಲಾಯಿಲ ಗ್ರಾಮದ ಅಮ್ಮನಂಗಡಿ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ನಿತೇಶ್ (19) ಮೃತಪಟ್ಟವರು. ಬೈಕ್ ಚಲಾಯಿಸುತ್ತಿದ್ದ ಪುತ್ತೂರು ನಿವಾಸಿ ಲಿಖಿತ್(20) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರು ಉಜಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ.

ಇವರಿಬ್ಬರು ಮಾ.28ರಂದು ರಾತ್ರಿ ಸುಮಾರು 12.30ಕ್ಕೆ ಕಾರ್ಯಕ್ರಮ ಮುಗಿಸಿ ಬೈಕಿನಲ್ಲಿ ವಾಪಸ್ ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬೈಕ್ ಸ್ಕಿಡ್ ಆಗಿ ಉಜಿರೆ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಕಾಲೇಜು ರಸ್ತೆಯಲ್ಲಿರುವ ಪಂಚಮಿ ಲಾಡ್ಜ್ ಮುಂಭಾಗದ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ.

ಅಪಘಾತ ನಡೆದ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article