ಚುಟುಕು ಸಾಹಿತಿಗಳನ್ನು ಬೆಳೆಸುವಲ್ಲಿ ಚುಟುಕು ಸಾಹಿತ್ಯ ಪರಿಷತ್ತು ಬಹಳಷ್ಟು ಶ್ರಮವಹಿಸಿದೆ: ಹಸು ಒಡ್ಡಂಬೆಟ್ಟು

ಚುಟುಕು ಸಾಹಿತಿಗಳನ್ನು ಬೆಳೆಸುವಲ್ಲಿ ಚುಟುಕು ಸಾಹಿತ್ಯ ಪರಿಷತ್ತು ಬಹಳಷ್ಟು ಶ್ರಮವಹಿಸಿದೆ: ಹಸು ಒಡ್ಡಂಬೆಟ್ಟು


ಮಂಗಳೂರು: ಸಾಹಿತ್ಯ ಪ್ರಕಾರಗಳಲ್ಲಿ ಇತ್ತೀಚಿನ ದಿನಗಳಲ್ಲಿ ಓದುಗರು ಅತೀ ಹೆಚ್ಚು ಇಷ್ಟಪಡುವ ಪ್ರಕಾರವೆಂದರೆ ಅದು ಚುಟುಕು ಅಥವಾ ಹನಿಗವನವಾಗಿದೆ. ಕಳೆದ ನಲುವತ್ತು ವರ್ಷಗಳಿಂದ ಚುಟುಕು ಸಾಹಿತ್ಯ ಪರಿಷತ್ತು ಚುಟುಕು ಕವಿಗಳನ್ನು ಬೆಳೆಸುವಲ್ಲಿ ಬಹಳಷ್ಟು ಶ್ರಮವಹಿಸಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು ಹೇಳಿದರು.

ಕಾಸರಗೋಡು ಚುಟುಕು ಸಾಹಿತ್ಯ ಪರಿಷತ್ತಿನ ವತಿಯಿಂದ  ಅಧ್ಯಕ್ಷ ಶಿವರ ಕಾಸರಗೋಡು ಅವರ ನೇತೃತ್ವದಲ್ಲಿ ಕನ್ನಡ ಗ್ರಾಮದಲ್ಲಿ ನಡೆದ ಚುಟುಕು ಸಾಹಿತ್ಯೋತ್ಸವ ಮತ್ತು ಚುಟುಕು ಗೋಷ್ಠಿಯನ್ನು ಉದ್ಘಾಟಿಸಿ, ಅವರು ಚುಟುಕೊನ ಸಾಮರ್ಥ್ಯದ ಬಗ್ಗೆ ತಿಳಿಸಿದರು.


ನಮ್ಮ ಜೀವನದಲ್ಲಿ ಚುಟುಕುಗಳಿಗೆ ಮಹತ್ವ ತುಂಬಾ ಇದೆ. ಏಕೆಂದರೆ, ಚುಟುಕುಗಳು ನಮ್ಮ ಚಿಂತನೆಗೆ ಹೊಸ ದಾರಿ ತೋರಿಸುತ್ತವೆ. ಕೆಲವೊಮ್ಮೆ ನಗಿಸುವುದರ ಮೂಲಕವೂ, ಕೆಲವೊಮ್ಮೆ ಗಂಭೀರವಾಗಿ ಆಲೋಚಿಸುವಂತೆ ಮಾಡುವುದರ ಮೂಲಕವೂ ಜೀವನ ಪಾಠಗಳನ್ನು ನೀಡುತ್ತವೆ ಎಂದು ಹೇಳಿದರು.

ಕಾರ್ಯಕ್ರಮಕ್ಕೆ  ಡಾ. ವೆಂಕಟರಮಣ ಹೊಳ್ಳ ದೀಪ ಬೇಳಗಿಸಿ ಚಾಲನೆಕೊಟ್ಟರು.

ಗಡಿನಾಡ ಚೇತನ ಪ್ರಶಸ್ತಿ ಪುರಸ್ಕೃತರಾದ ರಾಧಾಕೃಷ್ಣ ಉಳಿಯತಡ್ಕ ದಿಕ್ಸೂಚಿ ಭಾಷಣಮಾಡಿದರು. ಖ್ಯಾತ ವ್ಯಂಗ್ಯಚಿತ್ರಕಾರ ವೆಂಕಟ ಭಟ್ ಎಡನೀರು ಕವಿಗೋಷ್ಟಿಯ ಅದ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಕಾಸರಗೋಡು ಗಡಿನಾಡು ಸಾಹಿತ್ಯ ಪರಿಷತ್ತು ಘಟಕದ ಸಂಘಟನಾ ಕಾರ್ಯದರ್ಶಿ ವಿಶಾಲಕ್ಷ ಪುತ್ರಕಲ, ಸಂಕೀರ್ತನೆಕಾರ ಜಯನಾಂದ ಹೊಸದುರ್ಗ, ಧಾರವಾಡದ ಸಂಜೀವ ತುಮಕನಾಳ, ದಿವ್ಯಾ ಗಟ್ಟಿ, ಡಾ. ವಾಣೀಶ್ರೀ ಕಾಸರಗೋಡು ಮತ್ತಿತರರು ಉಪಸ್ಥಿತರಿದ್ದರು.

ವಿರಾಜ್ ಅಡೂರು ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article