ಸಹಕಾರಿ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಗ್ರಸ್ಥಾನದಲ್ಲಿದೆ: ನಬಾರ್ಡ್ ಸಿಜಿಎಂ ಡಾ. ಸುರೇಂದ್ರ ಬಾಬು
ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ಗೆ ಭೇಟಿ ನೀಡಿದ ಅವರು ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಬ್ಯಾಂಕಿನ ಅಧಿಕಾರಿ ಗಳ ಜೊತೆಗೆ ಬ್ಯಾಂಕಿನ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ಮಾತನಾಡಿದರು. ಎಸ್ಸಿಡಿಸಿಸಿ ಬ್ಯಾಂಕ್ ದೇಶದ ಡಿಸಿಸಿ ಬ್ಯಾಂಕ್ಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಅಗ್ರಮಾನ್ಯ ಬ್ಯಾಂಕ್ ಆಗಿದೆ. ಸಂಪೂರ್ಣ ಗಣಕೀಕೃತವಾಗಿರುವ ತನ್ನ 113 ಶಾಖೆಗಳ ಮೂಲಕ ಕಾರ್ಯನಿರ್ವಹಿಸುತ್ತಿರುವ ಎಸ್ಸಿಡಿಸಿಸಿ ಬ್ಯಾಂಕ್ ಕೃಷಿ ಸಾಲ ವಿತರಣೆ ಹಾಗೂ ಮರುಪಾವತಿಯಲ್ಲಿ ಸಹಕಾರಿ ವ್ಯವಸ್ಥೆಗೆ ಮಾದರಿಯಾಗಿದ್ದು ಮಾತ್ರವಲ್ಲ ನಬಾರ್ಡ್ ಯೋಜನೆಗಳನ್ನು ಅನುಷ್ಟಾನಗೊಳಿಸುವಲ್ಲೂ ಎಸ್ಸಿಡಿಸಿಸಿ ಬ್ಯಾಂಕ್ ಮುಂಚೂಣಿಯಲ್ಲಿರುವ ಬಗ್ಗೆ ಡಾ. ಸುರೇಂದ್ರ ಬಾಬು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಅವರು ನಬಾರ್ಡ್ ಸಿಜಿಎಂ ಡಾ. ಸುರೇಂದ್ರ ಬಾಬು ಅವರನ್ನು ಸ್ವಾಗತಿಸಿ , ಬ್ಯಾಂಕ್ ನಡೆದು ಬಂದ ಪ್ರಗತಿಯ ಪರಿಚಯ ಮಾಡಿಕೊಟ್ಟರು. ಸ್ವಸಹಾಯ ಸಂಘಗಳ ಕಾರ್ಯನಿರ್ವಹಣೆಯಲ್ಲೂ ಬ್ಯಾಂಕ್ ಸಮರ್ಪಕವಾಗಿ ಕಾರ್ಯನಿರ್ವಹಿಸಿದೆ ಎಂದು ವಿವರಿಸಿದರು. ಬ್ಯಾಂಕಿಗೆ ಆಗಮಿಸಿದ ನಬಾರ್ಡ್ ಸಿಜಿಎಂ ಡಾ. ಸುರೇಂದ್ರ ಬಾಬು ಅವರನ್ನು ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಬಾರ್ಡ್ ಡಿಡಿಎಂ ಸಂಗೀತಾ ಕರ್ತ , ನಬಾರ್ಡ್ ಡಿಜಿಎಂ ಜಗದೀಶ್, ನಿರ್ದೇಶಕರುಗಳಾದ ಎಂ. ವಾದಿರಾಜ ಶೆಟ್ಟಿ, ಭಾಸ್ಕರ್ ಎಸ್.ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ, ಜೈರಾಜ್ ಬಿ.ರೈ, ಮಹೇಶ್ ಹೆಗ್ಡೆ, ಮೋನಪ್ಪ ಶೆಟ್ಟಿ ಎಕ್ಕಾರು, ಅಶೋಕ್ ಕುಮಾರ್ ಶೆಟ್ಟಿ, ಸದಾಶಿವ ಉಳ್ಳಾಲ್, ರಾಜೇಶ್ ರಾವ್, ಎಸ್.ಎನ್.ಮನ್ಮಥ , ಕುಶಲಪ್ಪ ಗೌಡ ,ಮುಖ್ಯ
ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಹಾಗೂ ಬ್ಯಾಂಕ್ ಅಧಿಕಾರಿಗಳು ಉಪಸ್ಥಿತರಿದ್ದವರು.