ಶ್ರೀ ಕಾಳಿಕಾಂಬಾ ದೇವಸ್ಥಾನಕ್ಕೆ ಶಾಸಕ ಕಾಮತ್ ಭೇಟಿ
Friday, March 27, 2026
ಮಂಗಳೂರು: ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಮಾ.27 ರಂದು ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಯುಗಾದಿ ಹಬ್ಬದ ಸಂದರ್ಭದಲ್ಲಿ ಶ್ರೀ ಕಾಳಿಕಾಂಬೆಯ ಕವಾಟೋಧ್ಘಾಟನೆ ದಿನ ಭೇಟಿ ನೀಡಿದರು.
ಆಡಳಿತಾಧಿಕಾರಿಗಳಾದ ಕೆ. ಉಮೇಶ್ ಆಚಾರ್ಯ ಪಾಂಡೇಶ್ವರ ಇವರು ಸ್ವಾಗತಿಸಿದರು. ಮಾಜಿ ಮೊಕ್ತೇಸರರಾದ ಸುಂದರ ಆಚಾರ್ಯ ಬೆಳುವಾಯಿ, ಎ. ಲೋಕೇಶ್ ಆಚಾರ್ಯ ಚಿಲಿಂಬಿ, ಮನಪಾ ಮಾಜಿ ಕಾರ್ಪೊರೇಟರ್ ಬಿ. ಸಂಧ್ಯಾ ಬಿಜೆಪಿಯ ಬಿ. ಮೋಹನ್, ಬಿಜೆಪಿ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಉಪಾಧ್ಯಕ್ಷ ರಮೇಶ್ ಹೆಗ್ಡೆ, ಸುಜೀರ್ ವಿನೋದ್, ಸುಬ್ರಹ್ಮಣ್ಯ ಆಚಾರ್ಯ, ಉದಯ ಆಚಾರ್ಯ, ಲಕ್ಷ್ಮಣ್ ಮತ್ತಿತರರು ಉಪಸ್ಥಿತರಿದ್ದರು.
