ವಾರ್ಷಿಕ ಕ್ರೀಡೋತ್ಸವ ಉತ್ಸವವಿದ್ದಂತೆ: ಶಿವರಾಮ ಕೆ.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಎಸ್. ಮಾತನಾಡಿ, ಕ್ರೀಡೆ ವ್ಯಕ್ತಿತ್ವರೂಪಿಸುವಲ್ಲಿ ಪ್ರಯೋಜನಕಾರಿಯಾಗಿದೆ. ಆಟಗಳ ಮೂಲಕ ಸೋಲು-ಗೆಲುವು ಎರಡನ್ನೂ ಸಮಾನಾವಾಗಿ ಸ್ವೀಕರಿಸುವ ಮೂಲಕ ಮಾನಸಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ. ಬದುಕಿನಲ್ಲೂ ಸೋಲು-ಗೆಲುವು ಸರ್ವೇ ಸಾಮಾನ್ಯ. ಇವೆರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಸೋಲಿನಿಂದ ಕಲಿತ ಪಾಠ ಬದುಕಿನುದ್ದಕ್ಕೂ ನೆನಪಿನಲ್ಲಿರುತ್ತದೆಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇದೇ ವೇಳೆ, ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ನಾನಾ ಕ್ರೀಡೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ತೃತೀಯ ಬಿಬಿಎ ವಿದ್ಯಾರ್ಥಿ ಬಿಂದಿಯಾ ಪೂಜಾರಿ ಕ್ರೀಡಾ ಪ್ರಮಾಣ ವಚನ ಬೋಧಿಸಿದರು.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಕೇಶವ ಮೂರ್ತಿ, ದೈಹಿಕ ಶಿಕ್ಷಣ ನಿರ್ದೇಶಕ ದಿವಾಕರ್, ದೈಹಿಕ ನಿವೃತ್ತ ನಿರ್ದೇಶಕ ದಿವಾಕರ್, ಇಂಗ್ಲಿಷ್ ವಿಭಾಗದ ನಿವೃತ್ತ ಪ್ರಾಧ್ಯಾಪಕ ಶ್ಯಾಮ್ ಭಟ್, ಕ್ರೀಡಾ ವಿಭಾಗದ ಕಾರ್ಯದರ್ಶಿ ತೃತೀಯ ಬಿಎ ವಿದ್ಯಾರ್ಥಿ ವಿಜಯ್, ಸೇರಿದಂತೆ ನಾನಾ ವಿಭಾಗಗಳ ಉಪನ್ಯಾಸಕರು ಉಪಸ್ಥಿತರಿದ್ದರು.
