ಮೂಡುಬಿದಿರೆ: ತೆಂಗಿನ ಮರದಿಂದ ಬಿದ್ದು ಕೂಲಿ ಕಾರ್ಮಿಕ ಸಾವು

ಮೂಡುಬಿದಿರೆ: ತೆಂಗಿನ ಮರದಿಂದ ಬಿದ್ದು ಕೂಲಿ ಕಾರ್ಮಿಕ ಸಾವು

ಮೂಡುಬಿದಿರೆ: ಮಾಂಟ್ರಾಡಿ ಗ್ರಾಮದಲ್ಲಿ ಸೋಮವಾರ ತೆಂಗಿನಕಾಯಿ ಕೊಯ್ಯುವ ವೇಳೆ ಮರವೇರಿದ್ದ ಕಾರ್ಮಿಕನೊಬ್ಬ ಕಾಲು ಜಾರಿ ಕೆಳಕ್ಕೆ ಬಿದ್ದು ಮೃತಪಟ್ಟಿದ್ದಾರೆ.

ಮಾಂಟ್ರಾಡಿ ಗ್ರಾಮದ ರಮೇಶ್ (38) ಮೃತ ವ್ಯಕ್ತಿ. ಸೋಮವಾರ ಬೆಳಗ್ಗೆ ಮನೆಯೊಂದರ ಆವರಣದಲ್ಲಿ ತೆಂಗಿನ ಮರಕ್ಕೆ ರಮೇಶ್ ತೆಂಗಿನಕಾಯಿ ಕೊಯ್ಯಲು ಮರವೇರಿದ್ದರು. ಈ ವೇಳೆ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಪರಿಣಾಮವಾಗಿ ತಲೆಗೆ ಹಾಗೂ ದೇಹಕ್ಕೆ ತೀವ್ರ ಗಾಯಗಳಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article