ಸಂತ ಫಿಲೋಮಿನಾ ಕಾಲೇಜಿನಲ್ಲಿ ‘ಕಲಾ ಉತ್ಸವ’
Monday, March 30, 2026
ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಮಾನವಿಕ ಶಾಸ್ತ್ರ ವಿಭಾಗದ ವತಿಯಿಂದ ಮಾರ್ಚ್ ೨೮ ರಂದು ಎಸ್ಜೆಎಂ ಸಭಾಂಗಣದಲ್ಲಿ ‘ಕಲಾ ಕಾರ್ನಿವಲ್’ ಎಂಬ ಅಂತರ್ವಿಭಾಗೀಯ ಕಲೋತ್ಸವ ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೋ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಪಾಠಭ್ಯಾಸದ ಜೊತೆಗೆ ಇಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಮಗ್ರ ಅಭಿವೃದ್ಧಿಯನ್ನು ಸಾಧಿಸಬೇಕು. ಇಂತಹ ಕಾರ್ಯಕ್ರಮವನ್ನು ಆಯೋಜಿಸಿದ ವಿಭಾಗವನ್ನು ಅವರು ಅಭಿನಂದಿಸಿದರು.
ಉಪಪ್ರಾಂಶುಪಾಲರಾದ ಡಾ. ವಿಜಯಕುಮಾರ್ ಎಂ. ಹಾಗೂ ಮಾನವಿಕ ಶಾಸ್ತ್ರ ವಿಭಾಗದ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಧನ್ಯಾ ಮತ್ತು ತಂಡ ಪ್ರಾರ್ಥನೆ ಸಲ್ಲಿಸಿದರು. ಮಾನವಿಕ ಶಾಸ್ತ್ರ ವಿಭಾಗದ ಡೀನ್ ಹಾಗೂ ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ನಾರ್ಬರ್ಟ್ ಮಸ್ಕರೇನ್ಹಸ್ ಸ್ವಾಗತಿಸಿದರು. ಬಿಎ ವಿದ್ಯಾರ್ಥಿ ಸಿಮ್ಸರುಲ್ ಹಕ್ ವಂದಿಸಿದರು. ಸಬೀದಾ ಕಾರ್ಯಕ್ರಮ ನಿರ್ವಹಿಸಿದರು.
ಉದ್ಘಾಟನೆಯ ನಂತರ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ಸಮಾರೋಪ ಸಮಾರಂಭದಲ್ಲಿ ಪ್ರಾಂಶುಪಾಲರಾದ ವಂ. ಡಾ. ಆಂಟನಿ ಪ್ರಕಾಶ್ ಮೊಂತೆರೋ ವಿಜೇತರಿಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೂ ಅಭಿನಂದನೆ ಸಲ್ಲಿಸಿದರು. ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಎಂ., ಮಾನವಿಕ ಶಾಸ್ತ್ರ ವಿಭಾಗದ ಡೀನ್ ಹಾಗೂ ಅಕಾಡೆಮಿಕ್ ರಿಜಿಸ್ಟ್ರಾರ್ ಡಾ. ನೋರ್ಬರ್ಟ್ ಮಸ್ಕರೆನ್ಹಾಸ್ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.
ಸಮಾರೋಪ ಕಾರ್ಯಕ್ರಮವು ವಿಷ್ಣುಪ್ರಿಯಾ ಅವರ ಪ್ರಾರ್ಥನಾ ನೃತ್ಯದಿಂದ ಪ್ರಾರಂಭವಾಯಿತು. ಸಂಜನಾ ಸ್ವಾಗತಿಸಿ, ರಿಯಾನಾ ವಂದಿಸಿದರು. ಸೃಷ್ಠಿ ಶೆಣೈ ಕಾರ್ಯಕ್ರಮ ನಿರ್ವಹಿಸಿದರು.




