ಅಪಘಾತ: ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು
Wednesday, April 29, 2026
ಕಾರ್ಕಳ: ಇಲ್ಲಿಯ ಖಾಸಗಿ ಕಾಲೇಜಿನ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತರನ್ನು ಪ್ರೇರಣಾ ಎಂದು ಗುರುತಿಸಲಾಗಿದ್ದು, ಅವರು ಬೈಕ್ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣಿಸುತ್ತಿದ್ದರು. ಏಪ್ರಿಲ್ 24 ರಂದು ಸಂಭವಿಸಿದ ಅಪಘಾತದಲ್ಲಿ, ಬೈಕ್ ಸವಾರ ನವೀನ್ಚಂದ್ರ ಮೂಲ್ಯ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರ ಮಗಳು ಕೂಡ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಪ್ರೇರಣಾ ಮತ್ತು ಆಕೆಯ ತಂದೆ ನವೀನ್ ಚಂದ್ರ ಮೂಲ್ಯ ಕಾಲೇಜಿಗೆ ಪರೀಕ್ಷೆಗೆ ಹೋಗಿ ಬೈಕ್ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ, ಕಾರ್ಕಳದಿಂದ ನಿಟ್ಟೆ ಕಡೆಗೆ ವೇಗವಾಗಿ ಬರುತ್ತಿದ್ದ ಕಾಲೇಜಿನ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಕಾರು ಪೆಟ್ರೋಲ್ ಬಂಕ್ ಬಳಿ ಬೈಕ್ಗೆ ಡಿಕ್ಕಿ ಹೊಡೆದಿದೆ.
ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.