ಏ.28 ರಂದು ಕುಂದಾಪುರ ಶ್ರೀ ಉರ್ಮಾರಿ ದೇವಳದ ವರ್ಧಂತ್ಯುತ್ಸವ
Monday, April 27, 2026
ಕುಂದಾಪುರ: ಇಲ್ಲಿನ ಹೊಸ ಬಸ್ ನಿಲ್ದಾಣದ ಸಮೀಪದ ಖಾರ್ವಿ ಕೆಳಕೇರಿಯಲ್ಲಿರುವ ಶ್ರೀ ಉರ್ಮಾರಿ ದೇವಸ್ಥಾನದ 15ನೇ ವರ್ಷದ ವಾರ್ಷಿಕ ವರ್ಧಂತಿ ಮಹೋತ್ಸವವು ಏ.28 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿರುವುದು.
ಬೆಳಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, ಗಣಪತಿ ಪೂಜೆ, ಕಲಶ ಸ್ಥಾಪನೆ, ಕಲಾತತ್ವ ಹೋಮ, ಆಧಿವಾಸ ಹೋಮ, ಅಲಂಕಾರ ಪೂಜೆ, ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಮಂಗಳಾರತಿ, ತೀರ್ಥ-ಪ್ರಸಾದ ವಿತರಣೆ, ಬಳಿಕ ಸೇವಾಕರ್ತರಿಂದ ಸಾರ್ವಜನಿಕ ಮಹಾ "ಅನ್ನ ಸಂತರ್ಪಣೆ" ಕಾರ್ಯಕ್ರಮ ನಡೆಯಲಿದೆ.
ಸಂಜೆ 6.30 ರಿಂದ ಸ್ಥಳೀಯ ಭಜನಾ ಮಂಡಳಿ ಅವರಿಂದ ಭಜನಾ ಕಾರ್ಯಕ್ರಮ ಹಾಗೂ 8 ಗಂಟೆಗೆ ರಾತ್ರಿ ಪೂಜೆ, ಮಂಗಳಾರತಿ ಹಾಗೂ ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಳದ ಪ್ರಕಟಣೆಯಲ್ಲಿ ತಿಳಿಸಿದೆ.