ಆರೋಗ್ಯ ರಕ್ಷಣೆ ಅರಿವು ಮೂಡಿಸುವುದು ಅಗತ್ಯ: ಡಾ. ಶ್ರದ್ಧಾ ಶೆಟ್ಟಿ
ಅವರು ಇಂದು ಭಾರತೀಯ ರೆಡ್ಕ್ರಾಸ್ ಸೊಸೈಟಿಯ ದ.ಕ. ಜಿಲ್ಲಾ ಘಟಕದ ವತಿಯಿಂದ ಯೂತ್ ರೆಡ್ಕ್ರಾಸ್ ಮಂಗಳೂರು ವಿ.ವಿ. ಮತ್ತು ನಿಟ್ಟೆ ಪರಿಗಣಿತ ವಿ.ವಿ. ಸಹಯೋಗದಲ್ಲಿ ನಗರದ ರೆಡ್ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆದ ವಿಶ್ವ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಯೂತ್ ರೆಡ್ಕ್ರಾಸ್ ಯೋಜನಾಧಿಕಾರಿಗಳಾದ ಸೈಂಟ್ ಅಲೋಶಿಯಸ್ ಕಾಲೇಜಿನ ಇಮ್ತಿಯಾಜ್ ಆಲಿ, ಬೆಸೆಂಟ್ ಮಹಿಳಾ ಕಾಲೇಜಿನ ದೀಕ್ಷಿತಾ, ಸೈಂಟ್ ಆಗ್ನೆಸ್ ಕಾಲೇಜಿನ ನಿಮಿತಾ.ಕೆ. ಮತ್ತು ತೃಷಾ ಕಾಲೇಜಿನ ಶಿಲ್ಪಾ ಶೆಟ್ಟಿ ಉಪಸ್ಥಿತರಿದ್ದರು. ಮಂಗಳೂರು ವಿ.ವಿ.ಯ ಯೂತ್ ರೆಡ್ಕ್ರಾಸ್ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್. ಸ್ವಾಗತಿಸಿ, ರೆಡ್ಕ್ರಾಸ್ ಕಾರ್ಯದರ್ಶಿ ಕಿಶೋರ್ಚಂದ್ರ ಹೆಗ್ಡೆ ವಂದಿಸಿದರು. ಯೂತ್ ರೆಡ್ಕ್ರಾಸ್ ಉಪ ಸಮಿತಿ ನಿರ್ದೇಶಕಿ ಡಾ.ಸುಮನ .ಬಿ. ಕಾರ್ಯಕ್ರಮ ನಿರೂಪಿಸಿದರು.
ಸ್ಪರ್ಧಾ ವಿಜೇತರು:
ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಏರ್ಪಡಿಸಿದ ರೀಲ್ಸ್ ಸ್ಪರ್ಧೆಯಲ್ಲಿ ನಿಟ್ಟೆ ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ತಂಡ ಪ್ರಥಮ, ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ತಂಡ ದ್ವಿತೀಯ ಹಾಗೂ ಮಿಲಾಗ್ರಿಸ್ ಪದವಿ ಕಾಲೇಜು ತಂಡ ತೃತೀಯ ಸ್ಥಾನ ಪಡೆಯಿತು. ಪೋಸ್ಟರ್ ತಯಾರಿ ಸ್ಪರ್ಧೆಯಲ್ಲಿ ಹಿಬಾ ಪರ್ವಿನ್, ಯೇನೆಪೊಯ ಮೆಡಿಕಲ್ ಕಾಲೇಜು (ಪ್ರಥಮ), ಆಯಿಶಾ ಸಫಾ, ಯೇನೆಪೊಯ ಮೆಡಿಕಲ್ ಕಾಲೇಜು (ದ್ವಿತೀಯ) ಹಾಗೂ ಮೈನಾ ಸಮಂತ, ನಿಟ್ಟೆ ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ (ತೃತೀಯ) ಸ್ಥಾನ ಪಡೆದರು.
