ನೃತ್ಯ ಪರಿಷತ್ನ ವತಿಯಿಂದ ವಿಶೇಷ ನೃತ್ಯ ಕಾರ್ಯಗಾರ
ಅವರು ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಾಯಿಗದಲ್ಲಿ ಹಮ್ಮಿಕೊಂಡಿರುವ ಭರತನಾಟ್ಯದ ವಿದ್ವತ್ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಾರದಾ ವಿದ್ಯಾಲಯದಲ್ಲಿ ಆಯೋಜಿಸಿದ ಒಂದು ದಿನದ ಭಾವಗಳ ಭಾಷೆ ರಸೋತ್ಪತಿ ಮತ್ತು ನಾಯಿಕ ನಾಯಕ ಎಂಬ ವಿಷಯದಲ್ಲಿ ವಿಶೇಷ ನೃತ್ಯ ಕಾರ್ಯಗಾರವನ್ನು ಉದ್ಘಾಟಿಸಿ ಮಾತಾಡಿದರು.
ನೃತ್ಯ ಕಲಾವಿದ ಮಕ್ಕಳಿಗೆ ಇಂತಹ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಕರ್ನಾಟಕ ಕರಾವಳಿ ನೃತ್ಯ ಕಲಾ ಪರಿಷತ್ನ ಕಾರ್ಯ ಅಭಿನಂದನೀಯ ಎಂದರು.
ಪರಿಷತ್ ಅಧ್ಯಕ್ಷೆ ವಿದುಷಿ ರಾಜಶ್ರೀ ಉಳ್ಳಾಲ್ ಪ್ರಸ್ತುತ ಪರಿಷತ್ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ಉಪಾಧ್ಯಕ್ಷ ವಿದ್ವಾನ್ ಚಂದ್ರಶೇಖರ ನಾವಡ, ಕಾರ್ಯದರ್ಶಿ ವಿದುಷಿ ಶಾರದಾಮಣಿ ಶೇಖರ್, ನಿಕಟಪೂರ್ವ ಅಧ್ಯಕ್ಷ ವಿದ್ವಾನ್ ಯು.ಕೆ. ಪ್ರವೀಣ್, ಕೋಶಾಧಿಕಾರಿ ವಿದ್ವಾನ್ ಸುರೇಶ್ ಅತ್ತಾವರ್ ಮತ್ತಿತರರು ಉಪಸ್ಥಿತರಿದ್ದರು.
ಗುರು ಶ್ರೀಧರ ಹೊಳ್ಳ ಸ್ವಾಗತಿಸಿ, ನಿರೂಪಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶಿರಸಿಯ ಪ್ರಸಿದ್ಧ ನೃತ್ಯ ಕಲಾವಿದೆ ಡಾ. ಸಹನಾ ಭಟ್ ಕಾರ್ಯಾಗಾರ ನಡೆಸಿಕೊಟ್ಟರು. ಮಂಗಳೂರಿನ ಸುಮಾರು 130ಕ್ಕೂ ಹೆಚ್ಚು ನೃತ್ಯ ಕಲಾವಿದರು, ನಗರದ ಅನೇಕ ಭರತನಾಟ್ಯ ಗುರುಗಳು ಭಾಗವಹಿಸಿದ್ದರು.