ಎರಡು ದಿನಗಳ ರೇಂಜರ್ಸ್ ಮತ್ತು ರೋವರ್ಸ್ ಹಾಗೂ ಯುವ ರೆಡ್ ಕ್ರಾಸ್ ವಾರ್ಷಿಕ ಶಿಬಿರ
ಕಾರ್ಯಕ್ರಮದ ಉದ್ಘಾಟಿಸಿದ ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಇದರ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಅವರು ಮಾತನಾಡಿ, ಶೈಕ್ಷಣಿಕ ಶಿಬಿರಗಳು ವಿದ್ಯಾರ್ಥಿಗಳಲ್ಲಿ ಸೇವಾ ಭಾವನೆ, ನಾಯಕತ್ವ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವಲ್ಲಿ ಸಹಕಾರಿಯಾಗಲಿದೆ ಎಂದು ಹೇಳಿದರು.
ಈ ಎರಡು ದಿನಗಳ ಶಿಬಿರದಲ್ಲಿ ಶೈಕ್ಷಣಿಕ ಚಟುವಟಿಕೆಗಳಾದಂತಹ ಪ್ರಥಮ ಚಿಕಿತ್ಸೆಯ ಅರಿವು ಮತ್ತು ಪ್ರಾತ್ಯಕ್ಷಿಕೆಯನ್ನು ಭಾರತೀಯ ಸ್ಕೌಟ್ಸ್ ಅಂಡ್ ಗೈಡ್ಸ್ ಇದರ ಜಿಲ್ಲಾ ಕಾರ್ಯದರ್ಶಿ ಪ್ರತಿಮ್ ಕುಮಾರ್ ನೆರವೇರಿಸಿ, ಮಂಗಳೂರಿನ ದೆಹಲಿ ಪಬ್ಲಿಕ್ ಸ್ಕೂಲ್ ಶಿಕ್ಷಕ ವೆಂಕಟ ರಾವ್ ರಾಷ್ಟ್ರಧ್ವಜದ ಮಹತ್ವದ ಬಗ್ಗೆ ತಿಳಿಸಿಕೊಟ್ಟು, ಕಾಲೇಜಿನ ಉಪನ್ಯಾಸಕರಾದ ಡಾ. ಅಶೋಕ್ ಸಿ.ಎಚ್., ಸೀಡ್ ಬಾಲ್ ಮಾಡುವ ಬಗ್ಗೆ ಮಾಹಿತಿಯನ್ನು ತಿಳಿಸಿಕೊಟ್ಟರು.
ಶಿಬಿರ ಜ್ಯೋತಿಯನ್ನು ನಯನ ನೆರವೇರಿಸಿದರು. ಧ್ಯಾನದ ಮಹತ್ವದ ಬಗ್ಗೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಮೈತ್ರಿ ಬಿ, ಹಕ್ಕಿಗಳ ವೀಕ್ಷಣೆಯನ್ನು ಸೈಂಟ್ ಅಲೋಶಿಯಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕಿರಣ್ ವಾಟಿ ಅವರು ನಡೆಸಿಕೊಟ್ಟರು. ಎನ್.ಎಂ.ಸಿ. ಕಾಲೇಜು ಸುಳ್ಯ ಇಲ್ಲಿಯ ಸಹಾಯಕ ಪ್ರಾಧ್ಯಾಪಕಿ ಡಾ. ಅನುರಾಧ ಕುರುಂಜಿ ಅವರು ವ್ಯಕ್ತಿತ್ವ ವಿಕಸನ ಕಾರ್ಯಗಾರವನ್ನು ನಡೆಸಿಕೊಟ್ಟು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿಯ ಸದಸ್ಯ ಸಚೇತ್ ಸುವರ್ಣ ಅವರು ಸಿಪಿಆರ್ ತರಬೇತಿ, ಪಂಜ ಸ್ಥಳೀಯ ಸಂಸ್ಥೆಯ ಸ್ಕೌಟ್ ಮಾಸ್ಟರ್ರಾದ ಭರತ್ ನಾಟ್ಸ್ ತರಬೇತಿಯನ್ನು ನೀಡಿದರು.
ಐಕ್ಯೂಎಸಿ ಸಂಯೋಜಕ ದೇವಿಪ್ರಸಾದ್ ಹಾಗೂ ಸಹ ಸಂಯೋಜಕಿ ಡಾ. ಜ್ಯೋತಿಪ್ರಿಯಾ ಉಪಸ್ಥಿತರಿದ್ದರು. ರೋವರ್ಸ್ ಮತ್ತು ರೇಂಜರ್ಸ್ನ ಕಾರ್ಯಕ್ರಮ ಸಂಯೋಜಕರಾದ ಡಾ. ಅಪರ್ಣ ಆಳ್ವ ಮತ್ತು ಇಕ್ಬಾಲ್, ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮ ಅಧಿಕಾರಿಗಳಾದ ಡಾ. ಅಶೋಕ್ ಸಿ.ಎಚ್., ಡಾ. ಜ್ಯೋತಿ ಪಿ. ಮತ್ತು ಮೈತ್ರಿ ಬಿ. ಶಿಬಿರವನ್ನು ಸಂಘಟಿಸಿದರು.
