ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 365 ವಿಮಾ ಗ್ರಾಮಗಳ ಘೋಷಣೆ

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 365 ವಿಮಾ ಗ್ರಾಮಗಳ ಘೋಷಣೆ


ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪರಿಕಲ್ಪನೆಯಂತೆ ಗ್ರಾಮಾಭಿವೃದ್ಧಿ ಯೋಜನೆಯು ಸ್ವ ಸಹಾಯ ಸಂಘಗಳ ಸದಸ್ಯರಿಗೆ ಮತ್ತು ಅವರ ಕುಟುಂಬಗಳಿಗೆ ವಿಮಾ ಭದ್ರತೆಯನ್ನು ನೀಡುವ ಸೇವೆಯನ್ನು ಕಳೆದ ಎರಡು ದಶಕಗಳಿಂದ ಮಾಡುತ್ತಾ ಬಂದಿದೆ. 


ಸಂಪೂರ್ಣ ಸುರಕ್ಷಾ/ ಆರೋಗ್ಯ ರಕ್ಷಾ ವಿಮಾ ಯೋಜನೆ, ಯೋಜನೆಯ ಸದಸ್ಯರ ಸಾಲಗಳಿಗೆ ಭದ್ರತೆಗಾಗಿ ‘ಪ್ರಗತಿ ರಕ್ಷಾ ಕವಚ’, ಎನ್.ಪಿ.ಎಸ್, ಪ್ರಧಾನ ಮಂತ್ರಿ ಸುರಕ್ಷಾ ಭಿಮಾ ಯೋಜನೆ, ಪ್ರಧಾನಮಂತ್ರಿ ಜೀವನ ಜ್ಯೋತಿ ಭಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಭಾರತೀಯ ಜೀವ ವಿಮಾ ನಿಗಮದ ಸಹಯೋಗದೊಂದಿಗೆ ಜೀವನಮಧುರ/ ಭಾಗ್ಯಲಕ್ಷ್ಮೀ, ಮೈಕ್ರೋಬಚತ್ ಮತ್ತು ಭಿಮಾ ಜ್ಯೋತಿ ಮುಂತಾದ ಹಲವಾರು ವಿಮಾ/ಪಿಂಚಣಿ ಸೌಲಭ್ಯಗಳ ಪ್ರಯೋಜನವನ್ನು ಈಗಾಗಲೇ ರಾಜ್ಯದ ಸುಮಾರು 26,20,304 ರಷ್ಟು ಮಂದಿ ಪಡೆದಿರುತ್ತಾರೆ.


ಯೋಜನೆಯ ಸಂಘಗಳ ಸದಸ್ಯರಿಗೆ ಪ್ರಯೋಜನವಾಗುವ ನಿಟ್ಟಿನಲ್ಲ್ಲಿ 2007 ರಿಂದ ಗ್ರಾಮಾಭಿವೃದ್ಧಿ ಯೋಜನೆಯು ಭಾರತೀಯ ಜೀವ ವಿಮಾ ನಿಗಮದೊಂದಿಗೆ ಒಪ್ಪಂದವನ್ನು ಮಾಡಿಕೊಂಡು ಕಡಿಮೆ ಪ್ರೀಮಿಯಂನ ವಿಶೇಷ ಪಾಲಿಸಿಗಳನ್ನು ಪರಿಚಯಿಸಲಾಗುತ್ತಿದೆ. ಪ್ರಸ್ತುತ ‘ಮೈಕ್ರೋಬಚತ್’ ಮತ್ತು ‘ಭಿಮಾ ಜ್ಯೋತಿ’ ಎಂಬ ಹೆಸರಿನ ಎರಡು ಪಾಲಿಸಿಗಳ ಪ್ರಯೋಜನವನ್ನು ಸದಸ್ಯರು ಪಡೆಯುತ್ತಿದ್ದಾರೆ.


ಮೈಕ್ರೋಬಚತ್ ಪಾಲಿಸಿಯಡಿ ‘ವಿಮಾ ಗ್ರಾಮ’ಗಳನ್ನು ಗುರುತಿಸುವ ವಿಶೇಷ ಕಾರ್ಯವನ್ನು ಭಾರತೀಯ ಜೀವ ವಿಮಾ ನಿಗಮವು ಮಾಡುತ್ತಿದೆ. ಈಗಾಗಲೇ ರಾಜ್ಯದಾದ್ಯಂತ 15,92,889 ಮಂದಿ ಮೈಕ್ರೋಬಚತ್ ಪಾಲಿಸಿಗಳನ್ನು ಮಾಡಿಸಿರುತ್ತಾರೆ.


ವಿಮಾ ಗ್ರಾಮ:

ಪ್ರತಿ ಗ್ರಾಮದ ಜನಸಂಖ್ಯೆ ಮತ್ತು ಅಲ್ಲಿ ಮಾಡಲಾದ ಮೈಕ್ರೋಬಚತ್ ಪಾಲಿಸಿಯ ಆಧಾರದಲ್ಲಿ ವಿಮಾ ಗ್ರಾಮಗಳನ್ನು ಗುರುತಿಸುವ ಕೆಲಸವನ್ನು ಭಾರತೀಯ ಜೀವ ವಿಮಾ ನಿಗಮವು ಮಾಡುತ್ತದೆ.

ವಿಮಾಗ್ರಾಮದ ಸೌಲಭ್ಯ ಪಡೆಯಲು ಮಾನದಂಡಗಳು:

*ಗ್ರಾಮದ ಜನಸಂಖ್ಯೆ 10,000 ಕ್ಕಿಂತ ಕಡಿಮೆ ಇರಬೇಕು

*ಸಂಬಂಧಿತ ಆರ್ಥಿಕ ವರ್ಷದಲ್ಲಿ ಕನಿಷ್ಟ 100 ಹೊಸ ಪಾಲಿಸಿಗಳಾಗಿರಬೇಕು. 

*ಸಂಬಂಧಿತ ಆರ್ಥಿಕ ವರ್ಷದಲ್ಲಿ 5,00,000 ರೂ. ಮೊತ್ತ ಪ್ರೀಮಿಯಂ ಸಂಗ್ರಹವಾಗಿದ್ದಲ್ಲಿ ಕನಿಷ್ಟ 50 ಹೊಸ ಪಾಲಿಸಿಗಳಾಗಿರಬೇಕು.

ಈವರೆಗೆ ನೀಡಲಾದ ಸೌಲಭ್ಯಗಳು: 

ಈಗಾಗಲೇ 2019 ರಿಂದ ರಾಜ್ಯದಾದ್ಯಂತ 365 ವಿಮಾ ಗ್ರಾಮಗಳನ್ನು ಗುರುತಿಸಲಾಗಿದೆ. ಆಯ್ಕೆಯಾದ ಗ್ರಾಮಗಳಿಗೆ ಒಂದು ಘಟಕಕ್ಕೆ 50,000 ರೂ. ದಿಂದ 1,00,000 ರೂ. ದವರೆಗಿನ ವೆಚ್ಚದಲ್ಲಿ ಈ ಕೆಳಗಿನ ಯಾವುದಾದರೂ ಒಂದು ಸೌಲಭ್ಯವನ್ನು ಒದಗಿಸಲಾಗುತ್ತಿದೆ. ಈ ಯೋಜನೆಯಡಿ ಶಾಲೆ/ ಗ್ರಾಮ ಪಂಚಾಯತ್/ ದೇವಸ್ಥಾನಗಳಿಗೆ ಕುಡಿಯುವ ನೀರಿನ ವ್ಯವಸ್ಥೆ (ನೀರಿನ ಟ್ಯಾಂಕ್, ಶುದ್ಧ ಕುಡಿಯುವ ನೀರಿನ ಘಟಕ), ಶಾಲೆಗಳಿಗೆ ಶೌಚಾಲಯ ಹಾಗೂ ಪೀಠೋಪಕರಣ, ಸೋಲಾರ್ ದಾರಿದೀಪ ವ್ಯವಸ್ಥೆ ಒಳಗೊಂಡಿರುತ್ತದೆ.

ವಿಮಾ ಗ್ರಾಮದಡಿ ಈಗಾಗಲೇ ಸೌಲಭ್ಯ ನೀಡಲಾದ ವಿವರಗಳು:

ಹಾವೇರಿ ತಾಲ್ಲೂಕಿನ ಅಗಡಿ ಗ್ರಾಮದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಹಾಗೂ ಭಾರತೀಯ ಜೀವ ವಿಮಾ ನಿಗಮದ ವತಿಯಿಂದ 2024-25ನೇ ಸಾಲಿನ ವಿಮಾ ಗ್ರಾಮ ಕಾರ್ಯಕ್ರಮದಡಿ ಆಯ್ಕೆಯಾಗಿರುವ ಶ್ರೀ ಶ್ರೇಷಾಚಲ ಸದ್ಗುರು ಅನುದಾನಿತ ಪ್ರೌಢಶಾಲೆಯಲ್ಲಿ ರಚನೆ ಮಾಡಲಾಗಿರುವ ಶೌಚಾಲಯವನ್ನು ಹಸ್ತಾಂತರ ಮಾಡಲಾಯಿತು.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌನಿಪಲ್ಲಿ ಗ್ರಾಮದಲ್ಲಿ ನಿಗದಿತ ಸಂಖ್ಯೆಯಲ್ಲಿ LIC ಮೈಕ್ರೋ ವಿಮೆ ಪಾಲಿಸಿ ಮಾಡಿರುವ ಬಗ್ಗೆ ಭಾರತೀಯ ಜೀವ ವಿಮಾ ನಿಗಮ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಸಹಭಾಗಿತ್ವದಲ್ಲಿ  ಗೌನಿಪಲ್ಲಿ ಗ್ರಾಮವನ್ನು ಮೈಕ್ರೋ ವಿಮಾ ಗ್ರಾಮವಾಗಿ ಘೋಷಿಸಿದ್ದು, ವಿಮಾ ಗ್ರಾಮದ ಯೋಜನೆಯಡಿ ಗೌನಿಪಲ್ಲಿ ಪೋಲಿಸ್ ಆರಕ್ಷಕ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪನೆಮಾಡಿ ಹಸ್ತಾಂತರಿಸಲಾಯಿತು.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ-2 ತಾಲ್ಲೂಕಿನ ಹೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೋಳೂರು ಗ್ರಾಮದಲ್ಲಿ ಭಾರತೀಯ ಜೀವ ವಿಮಾ ನಿಗಮ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಸಹಭಾಗಿತ್ವದಲ್ಲಿ ಹೋಳೂರು ಗ್ರಾಮವನ್ನು ಮೈಕ್ರೋ ವಿಮಾ ಗ್ರಾಮವಾಗಿ ಘೋಷಿಸಲಾಗಿದ್ದು, ಗ್ರಾಮದ ಕುವೆಂಪು ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಸ್ಥಾಪನೆಮಾಡಿ ಹಸ್ತಾಂತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಮಧುಗಿರಿ ಯೋಜನಾ ಕಚೇರಿಯ ಕೊಡಿಗೇನಹಳ್ಳಿ ವಲಯದ ವಿವೇಕಾನಂದ ಹೈಸ್ಕೂಲ್‌ನಲ್ಲಿ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ LIC Deputy manager ಸುರೇಶ್ ಯೋಜನಾಧಿಕಾರಿ ದಿನೇಶ್ ಕುಮಾರ, ಜಿಲ್ಲಾ ಜನಜಾಗೃತಿ ವೇದಿಕೆಯ ಸದಸದಸ್ಯರಾದ ಮಂಜುನಾಥ್ ಹೈಸ್ಕೂಲಿನ ಪ್ರಾಂಶುಪಾಲರ ಉಪಸ್ಥಿತಿಯಲ್ಲಿ ಉದ್ಘಾಟನೆ ನೆರವೇರಿಸಿ ನೀರಿನ ಸಂರಕ್ಷಣೆ ಮತ್ತು ಅದರ ಉಪಯೋಗ ಅನುಕೂಲ ಮತ್ತು ಅನಾನುಕೂಲಗಳ ಬಗ್ಗೆ ಮಾಹಿತಿ ನೀಡಲಾಯಿತು.

ಈಗಾಗಲೇ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಲ್ಲಿ ರಾಜ್ಯದಾದ್ಯಂತ 365 ವಿಮಾ ಗ್ರಾಮಗಳನ್ನು ಗುರುತಿಸಿ 1,42,63,016 ರೂ. ವೆಚ್ಚದ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಅನಿಲ್ ಕುಮಾರ್ ಎಸ್.ಎಸ್. ಅವರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article