ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಗಾಯ

ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಗಾಯ

ಬಂಟ್ವಾಳ: ರಾ.ಹೆ.ಯ ಫರಂಗಿಪೇಟೆ ಜಂಕ್ಷನಿನಲ್ಲಿ ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಸಂಭವಿಸಿದೆ.

ಗಾಯಾಳು ಪಾದಚಾರಿಯನ್ನು ಬೆಂಗಳೂರು-ವಿವೇಕನಗರ ನಿವಾಸಿ ನಿಖಿಲ್ (36) ಎಂದು ಹೆಸರಿಸಲಾಗಿದೆ. ಇವರು ಸಂಜೆ ಕೆಲಸ ಮುಗಿಸಿಕೊಂಡು ಮನೆ ಕಡೆ ಹೋಗಲು ಫರಂಗಿಪೇಟೆ ಜಂಕ್ಷನ್ನಿನಲ್ಲಿ ಹೆದ್ದಾರಿ ದಾಟುತ್ತಿದ್ದ ವೇಳೆ  ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಗಾಯಾಳುವನ್ನು   ಸ್ಥಳೀಯರು ಮಂಗಳೂರಿನ ವೆನ್ಲಾಕ್  ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article