ಬಂಟ್ವಾಳ ಕಂದಾಯ ಇಲಾಖೆಗೆ ಸಮಗ್ರ ಪ್ರಶಸ್ತಿ
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳ ಕಂದಾಯ ಇಲಾಖೆ ಸಿಬ್ಬಂದಿಗಳು ಭಾಗವಹಿಸಿ, ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸಹಿತ ಅಪರ ಜಿಲ್ಲಾಧಿಕಾರಿ, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತ, ಜಿಲ್ಲೆಯ ವಿವಿಧ ತಾಲೂಕುಗಳ ತಹಸೀಲ್ದಾರರು, ಎನ್ಐಟಿಕೆ ಸಂಸ್ಥೆಯ ಡೀನ್, ರಾಜ್ಯಾಧ್ಯಕ್ಷರು-ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ತಾಲೂಕು ಮಟ್ಟದ ಕಂದಾಯ ನೌಕರರ ಸಂಘ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕ್ರೀಡಾಕೂಟದ ಫಲಿತಾಂಶ:
ಕ್ರಿಕೆಟ್: ಬಂಟ್ವಾಳ ಪ್ರಥಮ, ಸುಳ್ಯ ದ್ವಿತೀಯ, ಹಗ್ಗಜಗ್ಗಾಟ (ಪುರುಷರು): ಬಂಟ್ವಾಳ ಪ್ರಥಮ, ಜಿಲ್ಲಾಧಿಕಾರಿಗಳ ಕಚೇರಿ, ಮಂಗಳೂರು ದ್ವಿತೀಯ, ಹಗ್ಗಜಗ್ಗಾಟ (ಮಹಿಳೆಯರು): ಬಂಟ್ವಾಳ ಪ್ರಥಮ, ಬೆಳ್ತಂಗಡಿ ದ್ವಿತೀಯ, ಥೋಬಾಲ್ (ಮಹಿಳೆಯರು): ಸುಳ್ಯ ಪ್ರಥಮ, ಕಡಬ ದ್ವಿತೀಯ, ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ (ಪುರುಷರು): ಬಂಟ್ವಾಳ ಪ್ರಥಮ, ಮಂಗಳೂರು ದ್ವಿತೀಯ, ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ (ಪುರುಷರು): ಬಂಟ್ವಾಳ ಪ್ರಥಮ, ಮಂಗಳೂರು ದ್ವಿತೀಯ, ಶಟಲ್ ಬ್ಯಾಡ್ಮಿಂಟನ್ ಡಬಲ್ಸ್ (ಮಹಿಳೆಯರು): ಜಿಲ್ಲಾಧಿಕಾರಿಗಳ ಕಚೇರಿ, ಮಂಗಳೂರು ಪ್ರಥಮ, ಬೆಳ್ತಂಗಡಿ ದ್ವಿತೀಯ
