ಆರ್ಥಿಕಸಂಕಷ್ಟ: ಕೇಂದ್ರದಿಂದ ತುರ್ತು ಸಾಲ ಯೋಜನೆ

ಆರ್ಥಿಕಸಂಕಷ್ಟ: ಕೇಂದ್ರದಿಂದ ತುರ್ತು ಸಾಲ ಯೋಜನೆ


ಮಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದಿಂದ ಉಂಟಾಗಿರುವ ಆರ್ಥಿಕ ಸಂಕಷ್ಟವನ್ನು ಎದುರಿಸಲು ಉದ್ಯಮಿಗಳಿಗೆ ಕೇಂದ್ರ ಸರಕಾರ ತುರ್ತು ಸಾಲ ಯೋಜನೆಯನ್ನು ಘೋಷಿಸಿದೆ. ಎಂಎಸ್‌ಎಂಇ ಹಾಗೂ ಎಂಎಸ್‌ಎಂಇಗಳಲ್ಲದ ಹಾಗೂ ವಿಮಾನ ಯಾನ ವಲಯಕ್ಕೆ 2,55,000 ಕೋಟಿರೂ.ಗಳ ಹೆಚ್ಚುವರಿ ಸಾಲದ ಯೋಜನೆ ಇದಾಗಿದೆ ಎಂದು ಬಿಜೆಪಿ ಆರ್ಥಿಕ ಪ್ರಕೋಷ್ಠ ದ.ಕ. ಜಿಲ್ಲಾ ಸಂಚಾಲಕ ಎಸ್.ಎಸ್. ನಾಯಕ್ ತಿಳಿಸಿದರು.

ತುರ್ತು ಕ್ರೆಡಿಟ್ ಲೈನ್ ಗ್ಯಾರಂಟಿ ಯೋಜನೆ ಕೇಂದ್ರ ಸರಕಾರ ಬೆಂಬಲಿತ ಕ್ರೆಡಿಟ್ ಗ್ಯಾರಂಟಿ ಕಾರ್ಯಕ್ರಮವಾಗಿದೆ. ಹಣಕಾಸು ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ನ್ಯಾಷನಲ್ ಕ್ರೆಡಿಟ್ ಗ್ಯಾರಂಟಿ ಟ್ರಸ್ಟಿ ಕಂಪನಿ ಈ ಯೋಜನೆಯನ್ನು ನಿರ್ವಹಿಸುತ್ತದೆ. ಬ್ಯಾಂಕ್ ಮತ್ತು ಎನ್‌ಬಿಎಫ್‌ಸಿಗಳು ಅರ್ಹ ಸಾಲಗಾರರಿಗೆ ಮೇಲಾಧಾರವಿಲ್ಲದೆ ಹೆಚ್ಚುವರಿ ಕಾರ್ಯನಿರತ ಬಂಡವಾಳ ಸಾಲವನ್ನು ವಿಸ್ತರಿಸಲು ಈ ಯೋಜನೆಯ ಮೂಲಕ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

2026ರ ಮಾರ್ಚ್ 31ರ ವೇಳೆಗೆ ಅಸ್ತಿತ್ವದಲ್ಲಿರುವ ಕಾರ್ಯನಿರತ ಬಂಡವಾಳ ಮಿತಿ ಹೊಂದಿರುವ ಎಂಎಸ್‌ಎಂಇ ಹಾಗೂ ಇತರ ಸಂಸ್ಥೆಗಳು ಹಾಗೂ ಸಲ ಸೌಲಭ್ಯ ಹೊಂದಿರುವ ವಿಮಾನ ಯಾನ ಸಂಸ್ಥೆಗಳು ಈ ಯೋಜನೆಯ ಪ್ರಯೋಜನ ಪಡೆಯಬಹುದು. ಈ ಮೇಲಿನ ಅವಧಿಗೆ ಬ್ಯಾಂಕ್ ಸಾಲಖಾತೆಯನ್ನು ಪ್ರಮಾಣಿತ ಎಂದು ವರ್ಗೀಕರಿಸಿದ್ದಲ್ಲಿ ಈ ಸಾಲ ಯೋಜನೆ ಅನ್ವಯವಾಗಲಿದೆ. ಬಡ್ಡಿ ದರ ಬ್ಯಾಂಕ್‌ಗಳಲ್ಲಿ ಶೇ. 0.75ರಿಂದ ಗರಿಷ್ಠ ಶೇ. 9 ಹಾಗೂ ಎನ್‌ಬಿಎಫ್‌ಸಿಗಳಿಂದ ಗರಿಷ್ಠ ಶೇ. 13. ಒಂದು ವರ್ಷದ ಸಾಲ ಮರುಪಾವತಿಗೆ ವಿನಾಯಿತಿ (ಬಡ್ಡಿ ಪಾವತಿಸಬೇಕು)ಯೊಂದಿಗೆ ಸಾಲವನ್ನು ಒದಗಿಸಲಾಗುತ್ತದೆ.  ಎಂದು ಅವರು ಹೇಳಿದರು.

ಸಾಲವನ್ನು 2027ರ ಮಾರ್ಚ್ 31ರೊಳಗೆ ಮಂಜೂರು ಮಾಡಿ, ಆ ವರ್ಷದ ಜೂ. 30ರೊಳಗೆ ವಿತರಿಸಬೇಕಿದೆ. ಇದಕ್ಕಾಗಿ ಬ್ಯಾಂಕ್‌ಗೆ ತೆರಳಬೇಕಿಲ್ಲ. ಉದ್ದಿಮೆದಾರರು ಈಗಲೇ ತಮ್ಮ ಅರ್ಜಿಯನ್ನು ‘ಜನ ಸಮರ್ಥ್’ ಪೋರ್ಟಲ್ ಮೂಲಕ ಸಲ್ಲಿಸಬಹುದು ಎಂದರು.

ರಾಜ್ಯ ಸರಕಾರಕ್ಕೆ ಒತ್ತಾಯ..

ಈ ಸಾಲಕ್ಕೆ ಕೇಂದ್ರ ಸರಕಾರ ಯಾವುದೇ ಗ್ಯಾರಂಟಿ ಶುಲ್ಕ, ದಸ್ತಾವೇಜು ಶುಲ್ಕ, ತಪಾಸಣೆ ಶುಲ್ಕ ವಿಽಸುತ್ತಿಲ್ಲ. ಆದರೆ,

ಕೇಂದ್ರದ ಸರಕಾರದ ಈ ತುರ್ತು ಸಾಲಕ್ಕೆ ರಾಜ್ಯ ಸರಕಾರ ಶೇ. 1ರಷ್ಟು ಮುದ್ರಾಂಕ ಶುಲ್ಕ ವಿಽಸುತ್ತಿದೆ. ದೇಶದ ಆರ್ಥಿಕ ಸಂಕಷ್ಟದ ಸಮಯದಲ್ಲಿ ಈ ಮುದ್ರಾಂಕ ಶುಲ್ಕ ಸಂಪೂರ್ಣ ವಿನಾಯಿತಿ ನೀಡಬೇಕು ಎಂದು ರಾಜ್ಯ ಸರಕಾರವನ್ನು ಒತ್ತಾಯಿಸಿದರು. 

ಬಿಜೆಪಿ ಆರ್ಥಿಕ ಪ್ರಕೋಷ್ಠ ದ.ಕ. ಜಿಲ್ಲಾ ಸಹ ಸಂಚಾಲಕ ಯೋಗೀಶ್ ಪೈ, ಸದಸ್ಯರಾದ ರಾಜೇಶ್ ರಾವ್ ಎಂ., ವಸಂತ ಶೆಟ್ಟಿ, ಡಾ.ಎಸ್.ಎಂ. ಶಿವಪ್ರಕಾಶ್, ರಘುನಾಥ್ ಪೈ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article