ಸಚಿವರಾಗಿದ್ದ ಸುಧಾಕರ್ ಅವರ ನಿಧನಕ್ಕೆ ಗಫೂರ್ ಸಂತಾಪ
Sunday, May 10, 2026
ಮಂಗಳೂರು: ಕರ್ನಾಟಕ ಸರ್ಕಾರದ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖಾ ಸಚಿವರಾಗಿದ್ದ ಸುಧಾಕರ್ ಅವರ ಅಗಲಿಕೆಯ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ಅವರ ನಿಧನದಿಂದ ರಾಜ್ಯವು ಒಬ್ಬ ಜನಪರ, ದಕ್ಷ ಹಾಗೂ ಅಭಿವೃದ್ಧಿ ಪರ ನಾಯಕನನ್ನು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಅವರ ಕುಟುಂಬದವರಿಗೆ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಸಂತಾಪ ಸೂಚಿಸಿದರು.