ಉಪಮುಖ್ಯಮಂತ್ರಿ ಡಿಕೆಸಿ ಜನುಮದಿನ: ಕಾಂಗ್ರೆಸ್ ಕಾನೂನು ವಿಭಾಗದಿಂದ ಮೌಂಟ್ ರೋಸರಿ ಆಶ್ರಮಕ್ಕೆ ಹಣ್ಣು ಹಂಪಲು ವಿತರಣೆ

ಉಪಮುಖ್ಯಮಂತ್ರಿ ಡಿಕೆಸಿ ಜನುಮದಿನ: ಕಾಂಗ್ರೆಸ್ ಕಾನೂನು ವಿಭಾಗದಿಂದ ಮೌಂಟ್ ರೋಸರಿ ಆಶ್ರಮಕ್ಕೆ ಹಣ್ಣು ಹಂಪಲು ವಿತರಣೆ


ಮೂಡುಬಿದಿರೆ: ಕೆಪಿಸಿಸಿ ಅಧ್ಯಕ್ಷ, ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜನ್ಮದಿನದ ಅಂಗವಾಗಿ ಕಾಂಗ್ರೆಸ್ ಕಾನೂನು ವಿಭಾಗ ದಿಂದ ಆಲಂಗಾರು ಮೌಂಟ್ ರೋಸರಿ ಆಶ್ರಮಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಮೂಲಕ ಹಣ್ಣು ಹಂಪಲು ವಿತರಿಸಲಾಯಿತು. 


ನಂತರ ಮಾತನಾಡಿದ ಮಿಥುನ್ ರೈ ಅವರು ಜಿಲ್ಲೆಯಲ್ಲಿ ನಿಸ್ವಾಥ೯ವಾದ ಸೇವೆ ನೀಡುವ ಸಂಸ್ಥೆಯಿದ್ದರೆ ಅದು ಆಲಂಗಾರಿನ ಮೌಂಟ್ ರೋಸರಿ ಆಶ್ರಮ. ಇಂದು ಉಪ ಮುಖ್ಯಮಂತ್ರಿ ಡಿಕೆಸಿ ಅವರ ಜನುಮದಿನವಾಗಿದ್ದು ಅವರಿಗೆ ಉತ್ತಮ ಆರೋಗ್ಯ, ರಾಜಕೀಯ ಜೀವನದಲ್ಲಿ ಉತ್ತುಂಗ ಶಿಖರಕ್ಕೆ ಹೋಗುವಂತಹ ಭಾಗ್ಯವನ್ನು ಕರುಣಿಸಲು  ಹಿರಿಯರ ಆಶೀವಾ೯ದ ಮುಖ್ಯ. ಮುಂಬರುವ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲು ನಿಮ್ಮೆಲ್ಲರ ಹಾರೈಕೆಯಿರಲಿ ಎಂದರು.

ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್, ಸಿಸ್ಟೆರ್ ಪ್ರೆಸಿಲ್ಲ, ಬ್ಲಾಕ್ ವಕ್ತಾರ ರಾಜೇಶ್ ಕಡಲಕೆರೆ, ಪುರಸಭೆಯ ಮಾಜಿ ಸದಸ್ಯರಾದ ಪಿ. ಕೆ ಥೋಮಸ್, ಪುರಂದರ ದೇವಾಡಿಗ, ಜೋಸ್ಸಿ ಮಿನೆಜಸ್, ಇಕ್ಬಾಲ್ ಕರೀಮ್,  ಕಾಂಗ್ರೆಸ್ ಪದಾಧಿಕಾರಿಗಳಾದ , ಮರ್ವೀನ್ ಲೋಬೊ,  ಪ್ರವೀಣ್ ಪೂಜಾರಿ, ಚಂದ್ರಹಾಸ ಸನಿಲ್, ಶೇಖರ್ ಪೂಜಾರಿ, ಸಂತೋಷ ಶೆಟ್ಟಿ ಮತ್ತಿತರರು ಈ ಸಂದಭ೯ದಲ್ಲಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article