ಬಸ್ ಸ್ಟ್ಯಾಂಡಿನಲ್ಲಿ ಪಾಕಿ೯ಂಗ್ ಮಾಡುವ ಕಾರ್ ಗಳಿಗೆ ಲಾಕ್, ವನ್-ವೇ ಸಂಚಾರ, ತ್ರಿಬಲ್ ವಾಹನ ರೈಡಿಂಗ್ ಗೆ ದಂಡ: ಶಾಸಕ ಕೋಟ್ಯಾನ್ ಪೊಲೀಸರಿಗೆ ಸೂಚನೆ
ಟ್ರಾಫಿಕ್ ಸಮಸ್ಯೆಗಳು, ಪಾರ್ಕಿಂಗ್ ಅವ್ಯವಸ್ಥೆ, ರಸ್ತೆ ಸುರಕ್ಷತೆ, ಚರಂಡಿ ವ್ಯವಸ್ಥೆ, ಸಾರ್ವಜನಿಕ ಆರೋಗ್ಯ, ತ್ಯಾಜ್ಯ ನಿರ್ವಹಣೆ, ವಿದ್ಯುತ್ ಸಮಸ್ಯೆಗಳು, ಪ್ರವಾಸೋದ್ಯಮ ಅಭಿವೃದ್ಧಿ, ಅಕ್ರಮ ಒತ್ತುವರಿ, ಸಾರ್ವಜನಿಕ ಮೂಲಸೌಕರ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ವಿವರವಾದ ಮಾಹಿತಿಯನ್ನು ಅವರು ಸಭೆಯ ಗಮನಕ್ಕೆ ತಂದರು.
ಸಾವ೯ಜನಿಕರ ಪರವಾಗಿ ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಬಾಹುಬಲಿ ಪ್ರಸಾದ್, ಸಾರಿಗೆ ಉದ್ಯಮಿ ನಾರಾಯಣ ಪಿ. ಎಂ, ಪುರಸಭೆಯ ಮಾಜಿ ಸದಸ್ಯ ರಾಜೇಶ್ ನಾಯ್ಕ್, ಬೆಳುವಾಯಿ ಗ್ರಾ. ಪಂ. ನ ಮಾಜಿ ಸದಸ್ಯ ಭರತ್ ಶೆಟ್ಟಿ, ರೋಟರಿ ಟೆಂಪಲ್ ಟೌನ್ ನ ಅಧ್ಯಕ್ಷ ಹರೀಶ್ ಎಂ. ಕೆ, ಜವನೆರ್ ಬೆದ್ರದ ಸ್ಥಾಪಕಾಧ್ಯಕ್ಷ ಅಮರ್ ಕೋಟೆ, ನೇತಾಜಿ ಬ್ರಿಗೇಡ್ ನ ಸಂಚಾಲಕ ರಾಹುಲ್ ಕುಲಾಲ್, ಪತ್ರಕರ್ತರಾದ ಧನಂಜಯ ಮೂಡುಬಿದಿರೆ ಬಿ. ಸೀತಾರಾಮ ಆಚಾಯ೯, ಯಶೋಧರ ವಿ. ಬಂಗೇರಾ, ಕೃಷ್ಣ ಕುಮಾರ್ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು.
ಸಾರ್ವಜನಿಕರ ಅಭಿಪ್ರಾಯಗಳನ್ನು ಆಲಿಸಿದ ಶಾಸಕರು, ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ, ಮೂಡುಬಿದಿರೆಯ ಪ್ರಮುಖ ಸಮಸ್ಯೆಗಳ ಕುರಿತು ಸಮಗ್ರವಾಗಿ ಅಧ್ಯಯನ ನಡೆಸಲು ಸಲಹಾ ಸಮಿತಿ (Advisory Committee) ರಚಿಸುವ ಬಗ್ಗೆ ಮಾರ್ಗದರ್ಶನ ನೀಡಿದರು. ಈ ಸಮಿತಿಯಲ್ಲಿ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಸಂಬಂಧಿತ ಇಲಾಖೆಗಳ ಸಹಭಾಗಿತ್ವದೊಂದಿಗೆ ಸಮಸ್ಯೆಗಳನ್ನು ಚರ್ಚಿಸಿ, ಪರಿಹಾರ ಕ್ರಮಗಳ ಕುರಿತು ಮುಂದಿನ 10 ದಿನಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದರು.
ತಾಲೂಕು ತಹಸೀಲ್ದಾರ್ ಶ್ರೀಧರ್ ಮುದಲಮನಿ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಇಲಾಖೆಗಳ ಅಧಿಕಾರಿಗಳು, ಪೊಲೀಸ್ ಇಲಾಖೆ, ತಾಲ್ಲೂಕು ಆಡಳಿತದ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕ ಪ್ರಮುಖರು ಭಾಗವಹಿಸಿದ್ದರು.


