ಕುಮಾರಧಾರೆಯಲ್ಲಿ ಅವಭೃತೋತ್ಸವ
Sunday, May 3, 2026
ಸುಬ್ರಹ್ಮಣ್ಯ: ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನದ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ನರಸಿಂಹ ಜಯಂತಿ ಮಹೋತ್ಸವದ ಅಂಗವಾಗಿ ಇಂದು ಶನಿವಾರ ಸುಬ್ರಹ್ಮಣ್ಯ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು.
ಈ ಅಂಗವಾಗಿ ಕುಮಾರಧಾರಾ ನದಿಯಲ್ಲಿ ಅವಭೃತೋತ್ಸವವು ಶ್ರದ್ಧಾ-ಭಕ್ತಿಯಿಂದ ನೆರವೇರಿತು. ವೈದಿಕ ಮಂತ್ರೋಚ್ಚಾರಣೆಗಳ ಮಧ್ಯೆ ನಡೆದ ಈ ಪವಿತ್ರ ಕ್ರಿಯೆ ಉತ್ಸವದ ವೈಭವವನ್ನು ಮತ್ತಷ್ಟು ಹೆಚ್ಚಿಸಿತು.
ಇದರೊಂದಿಗೆ ವಸಂತ ಪೂಜೆ ಕೂಡ ವಿಧಿವಿಧಾನಗಳೊಂದಿಗೆ ನೆರವೇರಿತು. ಈ ಸಂದರ್ಭ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಧಾರ್ಮಿಕ ವಿಧಿಗಳಲ್ಲಿ ತೊಡಗಿ ಪುಣ್ಯ ಗಳಿಸಿದರು.
ಶ್ರೀಪಾದರ ಸಾನ್ನಿಧ್ಯದಲ್ಲಿ ನಡೆದ ಈ ಕಾರ್ಯಕ್ರಮವು ಸಂಪ್ರದಾಯ, ಆಚಾರ ಮತ್ತು ಭಕ್ತಿ ಪರಂಪರೆಯ ಸಾರ್ಥಕತೆಯನ್ನು ಪ್ರತಿಬಿಂಬಿಸಿತು.