ಕುಕ್ಕೆ: ದೇವಳಕ್ಕೆ ತೆಲಂಗಾಣ ಸಾರಿಗೆ ಸಚಿವ ಭೇಟಿ

ಕುಕ್ಕೆ: ದೇವಳಕ್ಕೆ ತೆಲಂಗಾಣ ಸಾರಿಗೆ ಸಚಿವ ಭೇಟಿ


ಸುಬ್ರಹ್ಮಣ್ಯ: ತೆಲಂಗಾಣ ರಾಜ್ಯ ಸರಕಾರದ ಸಾರಿಗೆ ಸಚಿವ ಪೊನ್ನಮ್ ಪ್ರಭಾಕರ ಅವರು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಇವರನ್ನು ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸ್ವಾಗತಿಸಿದರು.

ಬಳಿಕ ಶ್ರೀ ದೇವಳಕ್ಕೆ ತೆರಳಿದ ಸಚಿವರು ಶ್ರೀ ದೇವರ ದರುಶನ ಮಾಡಿದರು.ಇವರಿಗೆ ಅರ್ಚಕರು ಶಾಲು ಹೊದಿಸಿ ಮಹಾಪ್ರಸಾದ ನೀಡಿದರು. ಬಳಿಕ ಅವರು ಹೊಸಳಿಗಮ್ಮನ ದರುಶನ ಮಾಡಿದರು.

ನಂತರ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಎಸ್. ಇಂಜಾಡಿ ಸಚಿವರನ್ನು ಭೇಟಿಯಾಗಿ ಅವರನ್ನು ಗೌರವಿಸಿದರು. 

ವ್ಯವಸ್ಥಾಪನಾ ಸಮಿತಿ ಸದಸ್ಯೆ ಲೀಲಾ ಮನಮೋಹನ್, ಶಿಷ್ಟಾಚಾರ ವಿಭಾಗದ ಪ್ರಮೋದ್ ಕುಮಾರ್ ಎಸ್. ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article