ರೆಡ್‌ಕ್ರಾಸ್ ಸಭಾಪತಿಗಳಿಂದ ರಾಜ್ಯಪಾಲರ ಭೇಟಿ

ರೆಡ್‌ಕ್ರಾಸ್ ಸಭಾಪತಿಗಳಿಂದ ರಾಜ್ಯಪಾಲರ ಭೇಟಿ


ಉಡುಪಿ: ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಭಾಪತಿ ಮತ್ತು ಉಡುಪಿ ಜಿಲ್ಲಾ ಸಭಾಪತಿಗಳಾದ ಬಸ್ರೂರು ರಾಜೀವ ಶೆಟ್ಟಿ ಇವರು ಕರ್ನಾಟಕ ಸರ್ಕಾರದ ರಾಜ್ಯಪಾಲ ಥಾವರ್‌ಚಂದ್ ಗೆಹಲೋಟ್ ಅವರನ್ನು ಭೇಟಿಯಾಗಿ ರೆಡ್‌ಕ್ರಾಸ್ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ರಾಜ್ಯದ ರೆಡ್‌ಕ್ರಾಸ್ ಚಟುವಟಿಕೆಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ರಾಜ್ಯಪಾಲರು ರೆಡ್ ಕ್ರಾಸ್‌ನ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವು ಸಲಹೆಗಳನ್ನು ನೀಡಿದರು.

ರಾಜ್ಯ ಆಡಳಿತ ಮಂಡಳಿಯ ಕೆಲವು ಸದಸ್ಯರು ಉಪಸ್ಥಿತರಿದ್ದರು.

ವಾರ್ಷಿಕ ಮಹಾಸಭೆ: 

ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕದ ವಾರ್ಷಿಕ ಮಹಾಸಭೆಯು ರೆಡ್‌ಕ್ರಾಸ್ ಅಧ್ಯಕ್ಷರು ಮತ್ತು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಇವರ ಅಧ್ಯಕ್ಷತೆಯಲ್ಲಿ ಮೇ 13 ರಂದು ಬೆಳಗ್ಗೆ 10.30 ಕ್ಕೆ ಉಡುಪಿ ಟೌನ್‌ಹಾಲಿನ ಮಿನಿಹಾಲ್‌ನಲ್ಲಿ ನಡೆಯಲಿದ್ದು ರೆಡ್‌ಕ್ರಾಸ್‌ನ ಸದಸ್ಯರು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article