ತೋಟಕ್ಕೆ ಉರುಳಿದ ಕಾರು: ಪ್ರಯಾಣಿಕರು ಅಪಾಯದಿಂದ ಪಾರು
Sunday, May 3, 2026
ಉಜಿರೆ: ಗುರುವಾಯನಕೆರೆ-ಕಾರ್ಕಳ ರಾಜ್ಯ ಹೆದ್ದಾರಿಯ ಅಳದಂಗಡಿಯ ಕೆದ್ದು ಸಮೀಪ ಕಾರ್ಕಳ ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಈ ಸ್ಥಳವು ಅಪಘಾತ ವಲಯವಾಗಿದ್ದು, ಆಗಾಗ ಅಪಘಾತಗಳು ಉಂಟಾಗುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.