ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ


ಉಜಿರೆ: ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ದರ್ಶನಕ್ಕೆ ಬಂದ ಸಂದರ್ಭದಲ್ಲಿ ವೈದ್ಯಕೀಯ ಸೇವೆ ಪಡೆಯಲು ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ತಮಿಳುನಾಡಿನ ಸೇಲಂ ಇಲ್ಲಿನ ದಿನೇಶ್ ಬಾಲಸುಬ್ರಹ್ಮಣ್ಯ ಅವರು ಈ ಆಸ್ಪತ್ರೆಯ ಅತ್ಯುತ್ತಮ ವೈದ್ಯಕೀಯ ಸೇವೆ ಮತ್ತು ಕಾಳಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. 

ಆಸ್ಪತ್ರೆಯ ಸೇವೆಯಿಂದ ತೃಪ್ತರಾದ ಇವರು ಆಸ್ಪತ್ರೆಗೆ 5.85 ಲಕ್ಷ ರೂ. ಮೌಲ್ಯದ ಬ್ರೋಂಕೊಸ್ಕೋಪಿ ಯಂತ್ರವನ್ನು ಕೊಡುಗೆಯಾಗಿ ನೀಡಿದರು.

ದಿನೇಶ್ ಬಾಲಸುಬ್ರಹ್ಮಣ್ಯ ಇವರು ಮೇ. ೫ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರಿಗೆ ಈ ಯಂತ್ರವನ್ನು ಹಸ್ತಾಂತರಿಸಿದರು. ಹೆಗ್ಗಡೆ ಅವರು ಕೊಡುಗೆಯನ್ನು ಸ್ವೀಕರಿಸಿ ಶುಭ ಹಾರೈಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಬಾಲಸುಬ್ರಹ್ಮಣ್ಯ ಅವರು, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸೇವೆ ನನಗೆ ಅತ್ಯಂತ ತೃಪ್ತಿ ನೀಡಿದ್ದು, ಆದಿನವೇ ಈ ಆಸ್ಪತೆಗೆ ಏನಾದರೂ ಕೊಡುಗೆ ನೀಡಬೇಕೆಂದು ನಿರ್ಧರಿಸಿ ಇಲ್ಲಿನ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಇವರಲ್ಲಿ ತಿಳಿಸಿದ್ದೆ. ಪ್ರತಿ ವರ್ಷ ಹೆಗ್ಗಡೆಯವರು ಈ ಆಸ್ಪತ್ರೆಯಲ್ಲಿ 5 ಕೋಟಿಗೂ ಅಧಿಕ ಮೊತ್ತದ ವೈದ್ಯಕೀಯ ಸೇವೆಯನ್ನು ಉಚಿತವಾಗಿ ನೀಡುತ್ತಿದ್ದು, ಇದರಲ್ಲಿ ಸರಿಸುಮಾರು 1.5 ಕೋಟಿ ರೂ.ವನ್ನು ಉಚಿತ ಡಯಾಲಿಸಿಸ್ ಸೇವೆಗಾಗಿ ವಿನಿಯೋಗಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದರು. 

ಯಾವುದೇ ಕೊಡುಗೆ ಬೇಡ ನಿಮ್ಮಂತವರ ಮೆಚ್ಚುಗೆಯ ನುಡಿ ಮತ್ತು ಸಂತೃಪ್ತಿಯೇ ನಮಗೆ ಸ್ಫೂರ್ತಿ ಎಂದು ಅವರು ಹೇಳಿದ್ದರೂ ನನ್ನ ಮನಸ್ಸಿನಲ್ಲಿ ಆಸ್ಪತ್ರೆಗೆ ಉಪಯೋಗವಾಗುವ ಬ್ರೋಂಕೊಸ್ಕೋಪಿ ಯಂತ್ರವನ್ನು ಕೊಡುಗೆಯಾಗಿ ನೀಡಲೇಬೇಕು ಎಂದು ಬಯಸಿದ್ದೆ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುವ ಎಲ್ಲಾ ಸಂಸ್ಥೆಗಳು ಜನಪರ ಕಾರ್ಯ ಮಾಡುತ್ತಿದ್ದು, ಈ ಆಸ್ಪತ್ರೆಯ ವೈದ್ಯಕೀಯ ಸೇವೆ ಅತ್ಯಂತ ಉತ್ತಮವಾಗಿದೆ ಎಂದರು.

ಈ ಸಂದರ್ಭದಲ್ಲಿ ಹೇಮಾವತಿ ವಿ. ಹೆಗ್ಗಡೆ, ಶ್ರದ್ಧಾ ಅಮಿತ್‌ಕುಮಾರ್, ಶುತ, ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ದಿನೇಶ್ ಬಾಲಸುಬ್ರಹ್ಮಣ್ಯ ಸಹೋದರ ಸುಸಿನ್ ಜೆ ದಂಪತಿಗಳು, ನರ್ಸಿಂಗ್ ಅಧೀಕ್ಷಕಿ ಶೆರ್ಲಿ, ಪರ್ಚೇಸ್ ಮೆನೇಜರ್ ಅಜಯ್ ಕುಮಾರ್ ಪಿ.ಕೆ., ಮಾರ್ಕೆಟಿಂಗ್ ಎಕ್ಷ್‌ಕ್ಯೂಟಿವ್ ಸುಮಂತ್ ರೈ ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article