ಎಸ್ಐಟಿ ಎಸ್ಪಿ ಇದ್ದ ಕಾರು ಅಪಘಾತ
Tuesday, June 16, 2026
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ಬುರುಡೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಉರುಳಿದೆ.
ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ. ಸೈಮನ್, ಇನ್ಸ್ಪೆಕ್ಟರ್ ಕುಸುಮಾಧರ್, ಸಿಬ್ಬಂದಿ ಮಂಜುನಾಥ್ ಸೇರಿ ಚಿಕ್ಕಮಗಳೂರು ಜಿಲ್ಲಾ ಎಸ್ಪಿ ಹಾಗೂ ಎಸ್ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ ಬುರುಡೆ ಪ್ರಕರಣದ ಚಿನ್ನಯ್ಯ ಹೈಕೋರ್ಟ್ ರಿಟ್ ಪಿಟಿಷನ್ ಹಾಕಿರುವ ಬಗ್ಗೆ ಮಾತುಕತೆ ನಡೆಸಲು ತೆರಳುತ್ತಿದ್ದಾಗ ಇಂದು ಮಧ್ಯಾಹ್ನ ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪೊಲೀಸ್ ಇಲಾಖೆಯ ಕಾರು ಪಲ್ಟಿಯಾಗಿದೆ.
ಕಾರಿನಲ್ಲಿ ಚಾಲಕ ಸೇರಿ ಒಟ್ಟು ನಾಲ್ಕು ಜನ ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಯಾರಿಗೂ ಯಾವುದೇ ಗಾಯವಾಗಿಲ್ಲ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.