ಜೂ.21 ರಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಉಚಿತ 'ಯೋಗ ಮತ್ತು ಯೋಗಾಸನ' ಶಿಬಿರ
ಈ ಶಿಬಿರವು ಜೂನ್ 21 ರಿಂದ ಜೂನ್ 30ರವರೆಗೆ ಪ್ರತಿದಿನ ಸಂಜೆ 6 ರಿಂದ 7.30 ರವರೆಗೆ ಮಂಗಳೂರಿನ ಉರ್ವಸ್ಟೋರ್ ನ ಗಣೇಶ ದೇವಸ್ಥಾನದ ಹತ್ತಿರ ಇರುವ ಬ್ರಹ್ಮಕುಮಾರೀಸ್ ವಿಶ್ವಶಾಂತಿ ಮಂದಿರದಲ್ಲಿ ನಡೆಯಲಿದೆ.
ಶಿಬಿರದಲ್ಲಿ ಯೋಗಾಭ್ಯಾಸ, ಯೋಗಾಸನಗಳು, ಪ್ರಾಣಾಯಾಮ, ಧ್ಯಾನ ಹಾಗೂ ಮೆಡಿಟೇಷನ್ ಜ್ಞಾನ ಕುರಿತು ಅನುಭವಿ ತರಬೇತುದಾರರಿಂದ ಪ್ರಾಯೋಗಿಕ ತರಬೇತಿ ನೀಡಲಾಗುವುದು. ಇಂದಿನ ಒತ್ತಡದ ಜೀವನಶೈಲಿಯಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಯೋಗವು ಅತ್ಯುತ್ತಮ ಸಾಧನವಾಗಿದ್ದು, ಈ ಶಿಬಿರವು ಸಾರ್ವಜನಿಕರಿಗೆ ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಸಹಕಾರಿಯಾಗಲಿದೆ.
ಶಿಬಿರದಲ್ಲಿ ಭಾಗವಹಿಸುವವರಿಗೆ ಮನಸ್ಸಿನ ಏಕಾಗ್ರತೆ ಮತ್ತು ನೆನಪಿನ ಶಕ್ತಿ ವೃದ್ಧಿಯಾಗುವುದು, ದೇಹದ ತೂಕ ನಿಯಂತ್ರಣ, ಬೆನ್ನು ಹಾಗೂ ಕುತ್ತಿಗೆ ನೋವಿನ ನಿವಾರಣೆ, ಹೈಬಿಪಿ, ಮಧುಮೇಹ, ಅಸ್ತಮಾ ಮೊದಲಾದ ಜೀವನಶೈಲಿ ಸಂಬಂಧಿತ ಸಮಸ್ಯೆಗಳನ್ನು ನಿಯಂತ್ರಿಸಲು ಸಹಾಯಕವಾಗುವ ಯೋಗಾಭ್ಯಾಸಗಳನ್ನು ಕಲಿಸಲಾಗುವುದು. ಅಲ್ಲದೆ, ಜೀರ್ಣಕ್ರಿಯೆ ಸುಧಾರಣೆ, ರೋಗನಿರೋಧಕ ಶಕ್ತಿ ಹೆಚ್ಚಳ, ಒತ್ತಡ ನಿವಾರಣೆ ಹಾಗೂ ಆಂತರಿಕ ಶಾಂತಿ ಮತ್ತು ಸಂತೋಷವನ್ನು ಅನುಭವಿಸಲು ಸಹಕಾರಿ ಧ್ಯಾನಾಭ್ಯಾಸವನ್ನೂ ನಡೆಸಲಾಗುವುದು.
ಆಸಕ್ತ ಸಾರ್ವಜನಿಕರು ಈ ಉಚಿತ ಶಿಬಿರದಲ್ಲಿ ಭಾಗವಹಿಸಿಸಬಹುದು ಎಂದು ಬ್ರಹ್ಮಕುಮಾರಿ ವಿಶ್ವೇಶ್ವರಿ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9886247272 ಸಂಪರ್ಕಿಸಬಹುದಾಗಿದೆ.