ದ.ಕ. ಜಿಲ್ಲಾ ಬಿಜೆಪಿಯಿಂದ ಪೊಲೀಸ್ ಅಧೀಕ್ಷಕರಿಗೆ ಮನವಿ
Monday, June 15, 2026
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರ ಕೋವಿ ಪರವಾನಿಗೆಯನ್ನು ನವೀಕರಿಸಲು ನಿರಾಕ್ಷೇಪಣಾ ಪತ್ರವನ್ನು ನೀಡಲು ಅತಿ ತುರ್ತಾಗಿ ಕ್ರಮವಹಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಅಧೀಕ್ಷಕರನ್ನು ಭೇಟಿಯಾಗಿ ಬಿಜೆಪಿಯ ದ.ಕ. ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಕಿಶೋರ್ ಕುಮಾರ್ ಪುತ್ತೂರು, ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್ ಉಪಸ್ಥಿತರಿದ್ದರು.