ಬೀದಿಬದಿ ವ್ಯಾಪಾರಿಗಳ ಪಿ.ಎಂ. ಸ್ವನಿಧಿ ಸಾಲ ಮಂಜೂರು ಮಾಡದೆ ಸತಾಯಿಸುತ್ತಿರುವ ಬ್ಯಾಂಕುಗಳ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿಗೆ ದೂರು
ಇನ್ನು ಕೆಲವು ಬ್ಯಾಂಗಳು ಎಲ್ಲಾ ದಾಖಲೆಗಳನ್ನು ಒದಗಿಸಿದರೂ ಸಾಲ ಮಂಜೂರು ಮಾಡಲು ಮೀನಮೇಷ ಎಣಿಸುತ್ತಿದೆ. ಇದರಿಂದಾಗಿ ಸಾಲದ ಅವಶ್ಯಕತೆ ಇರುವ ಬಡ ಬೀದಿ ವ್ಯಾಪಾರಿಗಳಿಗೆ ಅನ್ಯಾಯವಾಗುತ್ತಿದೆ. ಬೀದಿಬದಿ ವ್ಯಾಪಾರಿಗಳಿಗೆ ಮೊದಲ ಹಂತದಲ್ಲಿ 15,000 ಸಾಲ ಪಡೆದು ಮರುಪಾವತಿ ಮಾಡಿದ ಬೀದಿ ವ್ಯಾಪಾರಿಗಳು ಎರಡನೇ ಮತ್ತು ಮೂರನೇ ಹಂತದ ಸಾಲ ಪಡೆಯಲು ಅರ್ಹರಿದ್ದರೂ ವಿನಾ ಕಾರಣ ಬಡವರ ಹಕ್ಕಿನ ಸಾಲವನ್ನು ರಾಷ್ಟ್ರೀಕೃತ ಬ್ಯಾಂಕುಗಳು ನಿರಾಕರಿಸುತ್ತಿದೆ.
ಬಡ ಬೀದಿ ವ್ಯಾಪಾರಿಗಳನ್ನು ಆರ್ಥಿಕವಾಗಿ ಸ್ವಾವಲಂಬಿ ಮಾಡುವ ಸರಕಾರದ ಯೋಜನೆಗಳನ್ನು ರಾಷ್ಟ್ರೀಕೃತ ಬ್ಯಾಂಕುಗಳು ವಿಫಲಗೊಳಿಸುತ್ತಿದೆ ಎಂದು ಬೀದಿಬದಿ ವ್ಯಾಪಾರಸ್ಥರ ಸಂಘವು ಆರೋಪಿಸಿದೆ.
ರಾಷ್ಟ್ರೀಕೃತ ಮತ್ತು ಖಾಸಗಿ ವಲಯಗಳಲ್ಲಿರುವ ಬ್ಯಾಂಕುಗಳ ಸಭೆ ನಡೆಸಿ ಪಿ.ಎಂ. ಸ್ವನಿಧಿ ಸಾಲ ಯೋಜನೆಯ ಪ್ರಗತಿ ಪರಿಶೀಲಿಸಿ ಬಡ ಬೀದಿ ವ್ಯಾಪಾರಿಗಳಿಗೆ ಸಾಲ ನೀಡದೆ ವಂಚಿಸುತ್ತಿರುವ ಬ್ಯಾಂಕುಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ನಿಯೋಗವು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದೆ.
ನಿಯೋಗದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಪಿ.ಎಂ ಸ್ವನಿಧಿ ಸಾಲ ಮಂಜೂರು ಮಾಡದೆ ಬೀದಿಬದಿ ವ್ಯಾಪಾರಿಗಳನ್ನು ಸತಾಯಿಸುವ ಬ್ಯಾಂಕುಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಮುಝಫರ್ ಅಹ್ಮದ್, ಪ್ರಧಾನ ಕಾರ್ಯದರ್ಶಿ ಸಂತೋಷ್ ಆರ್.ಎಸ್., ಉಪಾಧ್ಯಕ್ಷ ಎಂ.ಎನ್. ಶಿವಪ್ಪ, ಕೋಶಾಧಿಕಾರಿ ಹಂಝ ಮೊಹಮ್ಮದ್ ಮತ್ತು ಅಶ್ರಫ್ ಉಪಸ್ಥಿತರಿದ್ದರು.