‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ
ಯುವಜನರಲ್ಲಿ ಆರೋಗ್ಯಕರ ಜೀವನಶೈಲಿ, ದೈಹಿಕ ಕ್ಷಮತೆ, ಪರಿಸರ ಸಂರಕ್ಷಣೆ ಹಾಗೂ ಯುವ ಸಬಲೀಕರಣದ ಕುರಿತು ಜಾಗೃತಿ ಮೂಡಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿತ್ತು.
ಬೆಳಗ್ಗೆ 7 ಗಂಟೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಿಂದ ಸೈಕಲ್ ಜಾಥಾಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ’ಸೋಜಾ ಅವರು ಚಾಲನೆ ನೀಡಿ ಮಾತನಾಡಿ, ಆರೋಗ್ಯಕರ ಜೀವನಕ್ಕಾಗಿ ಸೈಕ್ಲಿಂಗ್ ಅತ್ಯಂತ ಪರಿಣಾಮಕಾರಿ ಸಾಧನವಾಗಿದ್ದು, ಪರಿಸರ ಸಂರಕ್ಷಣೆಯಲ್ಲಿಯೂ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದ.ಕ. ಜಿಲ್ಲೆಯ ಮೇರಾ ಯುವ ಭಾರತದ ಉಪನಿರ್ದೇಶಕ ಉಲ್ಲಾಸ್ ಕೆ.ಟಿ.ಕೆ. ಅವರು ಯುವಜನರ ಉತ್ಸಾಹವನ್ನು ಶ್ಲಾಘಿಸಿದರು. ವಿವಿಧ ಸಂಘ-ಸಂಸ್ಥೆಗಳ ಸಹಕಾರವನ್ನು ಅಭಿನಂದಿಸಿ, ಆರೋಗ್ಯವಂತ ಹಾಗೂ ಸದೃಢ ರಾಷ್ಟ್ರ ನಿರ್ಮಾಣದಲ್ಲಿ ಸೈಕ್ಲಿಂಗ್ ಮಹತ್ವದ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು.
ಪ್ಗರಮುಖರಾದ ಜಗದೀಶ್ ಕೆ., ಶೇಷಪ್ಪ ಅಮೀನ್, ಚಿತ್ತರಂಜನ್ ಬೋಳಾರ್, ಪರಾಂಜಲಿ ಮಾರಿಯಾ, ದಿನೇಶ್ ಅತ್ತಾವರ, ಅನಿಲ್ ಶೇಟ್, ಹರ್ನಿಶ್, ಹಾರ್ದಿಕ್ ರೈ ಮತ್ತಿತರರು ಉಪಸ್ಥಿತರಿದ್ದರು.
