ಎಕ್ಸ್‌ಪರ್ಟ್ ಪಿ.ಯು. ಕಾಲೇಜಿನಲ್ಲಿ ವಿನೂತನ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಎಕ್ಸ್‌ಪರ್ಟ್ ಪಿ.ಯು. ಕಾಲೇಜಿನಲ್ಲಿ ವಿನೂತನ ರೀತಿಯಲ್ಲಿ ವಿಶ್ವ ಪರಿಸರ ದಿನಾಚರಣೆ


ಮಂಗಳೂರು: ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ವಿಶ್ವ ಪರಿಸರ ದಿನಾಚರಣೆಯನ್ನು ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಪ್ರಿನ್ಸಿಪಾಲ್, ಉಪನ್ಯಾಸಕರು ಬಸಳೆ ಹಾಗೂ ತೊಂಡೆ ಗಿಡಗಳನ್ನು ನೆಡುವ ಮೂಲಕ ವಿನೂತನ ರೀತಿಯಲ್ಲಿ ಆಚರಿಸಿದರು.


ಈ ಸಂದರ್ಭದಲ್ಲಿ ಕಾಲೇಜಿನ ಪ್ರಿನ್ಸಿಪಾಲ್ ಪ್ರೊ. ರಾಮಚಂದ್ರ ಭಟ್ ಮಾತನಾಡಿ, ವಿಶ್ವ ಪರಿಸರ ದಿನದ ಸಮಯದಲ್ಲಿ ಗಿಡ ನೆಟ್ಟು ಮತ್ತೆ ಮರೆತು ಬಿಡುವುದೇ ಹೆಚ್ಚು. ನಮ್ಮ ವಿದ್ಯಾರ್ಥಿಗಳು ಬಸಳೆ, ತೊಂಡೆಕಾಯಿಯನ್ನು ನೆಟ್ಟಿದ್ದು ಮಾತ್ರವಲ್ಲ ನಿತ್ಯನೂ ನೀರು ಹಾಕಿ ಪೋಷಣೆ ಮಾಡುವ ಮೂಲಕ ಹಸಿರು ನಿರಂತರವಾಗಿ ಇರಲಿ ಎನ್ನುವ ಸಂದೇಶ ಸಾರಿದ್ದಾರೆ ಎಂದರು. 


ಈ ಬಳಿಕ ವಿದ್ಯಾರ್ಥಿಗಳು ಹತ್ತಿರದಲ್ಲಿರುವ ಸಾರ್ವಜನಿಕ ಪಾರ್ಕ್‌ನಲ್ಲಿ ಸ್ವಚ್ಛತಾ ಕಾರ‍್ಯಕ್ರಮವನ್ನು ನಡೆಸಿದರು.

ಸಂಯೋಜಕರಾದ ಭೌತಶಾಸ್ತ್ರ ವಿಭಾಗದ ಉಪನ್ಯಾಸಕ ಸೌರಭ್ ಅಂಚನ್, ಕನ್ನಡ ವಿಭಾಗದ ಉಪನ್ಯಾಸಕ ಕರುಣಾಕರ ಬಳ್ಕೂರು, ಹಿಂದಿ ವಿಭಾಗದ ಉಪನ್ಯಾಸಕ ಪ್ರಮೋದ್ ಕಿಣಿ, ಜೀವಶಾಸ್ತ್ರ ವಿಭಾಗದ ಮುಖ್ಯಸ್ಥೆ ರಶ್ಮಿ ಹೆಚ್. ಮತ್ತಿತರ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article